ರಾಜ್ಯದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರೆ ವೈದ್ಯಕೀಯ ಸಂಸ್ಥೆಗಳಲ್ಲಿ ಇಂತಹ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.………ಮುಂದೆ ಓದಿ……..
ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ತಡೆಯಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಸಚಿವರು ಹೇಳಿದರು.
ಈ ಕುರಿತು ಕಳವಳ ವ್ಯಕ್ತಪಡಿಸಿರುವ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಈ ಕುರಿತ ಪ್ರಕರಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ಸಚಿವರು ಹೇಳಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…