Advertisement
MIRROR FOCUS

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

Share

ರಾಜ್ಯದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.  ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರೆ ವೈದ್ಯಕೀಯ ಸಂಸ್ಥೆಗಳಲ್ಲಿ ಇಂತಹ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.………ಮುಂದೆ ಓದಿ……..

ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ತಡೆಯಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಸಚಿವರು ಹೇಳಿದರು.

ಡಾ. ಶರಣ್ ಪ್ರಕಾಶ್ ಪಾಟೀಲ್

ಈ ಕುರಿತು ಕಳವಳ ವ್ಯಕ್ತಪಡಿಸಿರುವ  ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಈ ಕುರಿತ ಪ್ರಕರಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು, ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.  ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ಸಚಿವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

17 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago