ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

April 5, 2025
9:17 PM

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು  ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್‌ ನಟ್‌ ಸೀಡ್ಸ್”‌ ಅಡಿಯಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಕಿಶೊರ್‌ ಕುಮಾರ್‌ ಕೊಡ್ಗಿ ಶ್ಲಾಘಿಸಿದ್ದಾರೆ.……..ಮುಂದೆ ಓದಿ…..

Advertisement

ಎಪ್ರಿಲ್‌ 2 ರಂದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ಅಧಿಸೂಚನೆ  ಹೊರಡಿಸಿದೆ. ಅದರ ಪ್ರಕಾರ HS code 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ”  ಆಮದಿನಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಇದರ ಜೊತೆಗೆ ಕನಿಷ್ಠ ಆಮದು ದರವನ್ನು ಪ್ರತೀ ಕೆಜಿಗೆ ರೂ 351 ನಿಗದಿಪಡಿಸಿದೆ.  ಹೀಗಾಗಿ ಈ ಸಂಖ್ಯೆಯಡಿಯಲ್ಲಿಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಠೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆಯಲ್ಲಿ ತಿಳಿಸಿದೆ.

To reduce arecanut imports, the DGFT has revoked the unrestricted foreign trade classification for roasted arecanut, effectively banning its import under the “roasted nut seeds” category. Campco President Kishore Kumar Kodgi has commended the central government for this decision.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು
April 10, 2025
9:58 AM
by: The Rural Mirror ಸುದ್ದಿಜಾಲ
ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |
April 10, 2025
8:13 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಗುಜ್ಜೆ ಕಡಲೆ ಗಸಿ
April 10, 2025
8:00 AM
by: ದಿವ್ಯ ಮಹೇಶ್
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ
April 10, 2025
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group