ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಕ್ರಮ | ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

May 2, 2025
8:50 PM

ಹಾಸನ ಜಿಲ್ಲೆ ಸಕಲೇಶಪುರ ಬಳಿಯ ಬೈಕೆರೆ ಗ್ರಾಮದಲ್ಲಿ ಇತ್ತೀಚಿಗೆ ಆನೆ ದಾಳಿಯಿಂದ ಮೃತಪಟ್ಟ ಷಣ್ಮುಖ ನಿವಾಸಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.  ಈ ಸಂದರ್ಭದಲ್ಲಿ  ಬಿಕ್ಕೋಡಿಯಲ್ಲಿ ಆನೆ  ಕಾರ್ಯಪಡೆಯ ಘಟಕ ಸ್ಥಾಪಿಸಿ ಸ್ಥಳೀಯರಿಗೆ ಆನೆಗಳ ಚಲನವಲನದ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಈ ಸಂದರ್ಭ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಸಕಲೇಶಪುರ, ಬೇಲೂರು ಸುತ್ತಮುತ್ತ  ಆನೆ ದಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೆಲವು ರೈತರು ತಮ್ಮ ಜಮೀನನ್ನೇ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಮುಂದಾಗಿದ್ದು, ಈ ಜಮೀನು ಖರೀದಿಸಿ ಅರಣ್ಯ ವಿಸ್ತರಣೆ ಮಾಡಿ ಆನೆ ಹಾವಳಿ ತಡೆಗೆ ಪರಿಶೀಲಿಸುವುದಾಗಿ ತಿಳಿಸಿದರು. ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳಲು ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲು ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಸಿಮೆಂಟ್ ಮಂಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Click And Follow the The Rural Mirror.com WhatsApp channel
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror