ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಮಾನವ- ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿರುವುದು ಆತಂಕಕಾರಿ ಘಟನೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ 60 ಕೋಟಿ ರೂಪಾಯಿ ವೆಚ್ಚದಲ್ಲಿ 35 ಕಿಲೋಮೀಟರ್ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಶೇಕಡ 75ರಷ್ಟು ಪೂರ್ಣಗೊಂಡಿದೆ. ಜೊತೆಗೆ ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಆನೆ ವಿಹಾರಧಾಮ ಮಾಡುವ ಪ್ರಸ್ತಾವನೆಯಿದೆ. ಇದಕ್ಕಾಗಿ 300 ಕೋಟಿ ರೂಪಾಯಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸಿದ್ದು, ಈ ಬಾರಿಯ ಮುಂಗಡಪತ್ರದಲ್ಲೇ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ನಿಯೋಗ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…