ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ರೈತರೊಂದಿಗೆ ಸಮಾಲೋಚನೆ ನಡೆಸಿದರು.
ಮಾನವ- ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿರುವುದು ಆತಂಕಕಾರಿ ಘಟನೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ 60 ಕೋಟಿ ರೂಪಾಯಿ ವೆಚ್ಚದಲ್ಲಿ 35 ಕಿಲೋಮೀಟರ್ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಶೇಕಡ 75ರಷ್ಟು ಪೂರ್ಣಗೊಂಡಿದೆ. ಜೊತೆಗೆ ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಆನೆ ವಿಹಾರಧಾಮ ಮಾಡುವ ಪ್ರಸ್ತಾವನೆಯಿದೆ. ಇದಕ್ಕಾಗಿ 300 ಕೋಟಿ ರೂಪಾಯಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸಿದ್ದು, ಈ ಬಾರಿಯ ಮುಂಗಡಪತ್ರದಲ್ಲೇ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ನಿಯೋಗ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…