ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ.………ಮುಂದೆ ಓದಿ……..
ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ. ಎ.ಶರವಣ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಜಮೀನನ್ನು ಎಲ್ಲೆಲ್ಲಿ ಒತ್ತುವರಿ ಮಾಡಲಾಗಿದೆ ಎಂಬುದನ್ನು ಗುರುತಿಸಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸರ್ಕಾರಿ ಜಮೀನು ಒತ್ತುವರಿ ತೆರವು ಗೊಳಿಸುವ ಸಂಬಂಧ ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೆ ಎರಡು ಬಾರಿ ಕಾರ್ಯಾಚರಣೆ ನಡೆಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸರಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಲು ಅವಕಾಶವಿಲ್ಲದಂತೆ ಕಾನೂನು ಜಾರಿಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…