ಕನ್ನಡದ ಕಾಂತಾರ ಚಿತ್ರದಲ್ಲಿನ ದೈವಾರಾಧನೆ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಈಗಾಗಲೇ ಎರಡು ದೂರು ದಾಖಲಾಗಿದೆ. ಮಡಿಕೇರಿಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಡಿಕೇರಿಯ ಡಿವೈಎಸ್ಪಿಗೆ ಹಿಂದೂ ಯುವ ಸೇನೆಯಿಂದ ನಟ ಚೇತನ್ ವಿರುದ್ಧ ದೂರು ನೀಡಲಾಗಿದೆ.
ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ಗೆ ದೂರು ಸಲ್ಲಿಸಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲವೆನ್ನುವ ಟೀಕೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…