ಕನ್ನಡದ ಕಾಂತಾರ ಚಿತ್ರದಲ್ಲಿನ ದೈವಾರಾಧನೆ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಈಗಾಗಲೇ ಎರಡು ದೂರು ದಾಖಲಾಗಿದೆ. ಮಡಿಕೇರಿಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಡಿಕೇರಿಯ ಡಿವೈಎಸ್ಪಿಗೆ ಹಿಂದೂ ಯುವ ಸೇನೆಯಿಂದ ನಟ ಚೇತನ್ ವಿರುದ್ಧ ದೂರು ನೀಡಲಾಗಿದೆ.
ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ಗೆ ದೂರು ಸಲ್ಲಿಸಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲವೆನ್ನುವ ಟೀಕೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…