ಚಿನ್ನಾರಿ ಮುತ್ತಾ ಎಂದೆ ಖ್ಯಾತಿ ಪಡೆದ ನಟ ವಿಜಯ್ ರಾಘವೇಂದ್ರ #Vijay Raghavendra ಸದಾ ನಗುಮೊಗದ ನಟ. ಸದಾ ತನ್ನ ಪತ್ನಿಯ ಬೆಂಬಲದೊಂದಿಗೆ ಜೀವನ ನಡೆಸುತ್ತಿದ್ದ ವಿಜಯ್ ಅವರಿಗೆ ದೊಡ್ಡ ಶಾಕ್ ಆಗಿದೆ. ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸ್ಪಂದನ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ ತಿಳಿದು ಇಡೀ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಅಭಿಮಾನಿಗಳಿಗೂ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸ್ಪಂದನಾ ಹಾಗೂ ವಿಜಯ್ ಅವರು ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲಿ ಇದ್ದರು. ಅದಕ್ಕೂ ಮೊದಲೇ ಸ್ಪಂದನ ಮೃತಪಟ್ಟಿದ್ದಾರೆ.
ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರ ಮಗಳು ಸ್ಪಂದನಾ. ವಿಜಯ್ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. 2007ರ ಆಗಸ್ಟ್ 26ರಂದು ಇವರು ಹಸಮಣೆ ಏರಿದ್ದರು. ವಿಜಯ್ ಹಾಗೂ ಸ್ಪಂದನಾ ಬ್ಯಾಂಕಾಕ್ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾಗೆ ಹೃದಯಾಘಾತ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ನಲ್ಲೇ ನಡೆಯಲಿದೆ. ಮಂಗಳವಾರ (ಆಗಸ್ಟ್ 8) ಅವರ ಮೃತದೇಹ ಬೆಂಗಳೂರಿಗೆ ಬರಲಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…