ಚಿನ್ನಾರಿ ಮುತ್ತಾ ಎಂದೆ ಖ್ಯಾತಿ ಪಡೆದ ನಟ ವಿಜಯ್ ರಾಘವೇಂದ್ರ #Vijay Raghavendra ಸದಾ ನಗುಮೊಗದ ನಟ. ಸದಾ ತನ್ನ ಪತ್ನಿಯ ಬೆಂಬಲದೊಂದಿಗೆ ಜೀವನ ನಡೆಸುತ್ತಿದ್ದ ವಿಜಯ್ ಅವರಿಗೆ ದೊಡ್ಡ ಶಾಕ್ ಆಗಿದೆ. ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಸ್ಪಂದನ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ ತಿಳಿದು ಇಡೀ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಅಭಿಮಾನಿಗಳಿಗೂ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸ್ಪಂದನಾ ಹಾಗೂ ವಿಜಯ್ ಅವರು ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲಿ ಇದ್ದರು. ಅದಕ್ಕೂ ಮೊದಲೇ ಸ್ಪಂದನ ಮೃತಪಟ್ಟಿದ್ದಾರೆ.
ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರ ಮಗಳು ಸ್ಪಂದನಾ. ವಿಜಯ್ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. 2007ರ ಆಗಸ್ಟ್ 26ರಂದು ಇವರು ಹಸಮಣೆ ಏರಿದ್ದರು. ವಿಜಯ್ ಹಾಗೂ ಸ್ಪಂದನಾ ಬ್ಯಾಂಕಾಕ್ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾಗೆ ಹೃದಯಾಘಾತ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ನಲ್ಲೇ ನಡೆಯಲಿದೆ. ಮಂಗಳವಾರ (ಆಗಸ್ಟ್ 8) ಅವರ ಮೃತದೇಹ ಬೆಂಗಳೂರಿಗೆ ಬರಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…