Advertisement
ಸುದ್ದಿಗಳು

ನಮ್ಮವರಿಗೆ ಅನ್ಯಾಯವಾದಾಗ ಧ್ವನಿ ಎತ್ತಲು ಭಯಬೇಡ : ಆದರ್ಶ ಗೋಖಲೆ | ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉಪನ್ಯಾಸ

Share

ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಖಂಡನೀಯ. ಹಿಂದೂ ದೇವಸ್ಥಾನಗಳನ್ನು ಧ್ವಂಸಮಾಡಿ, ಹಿಂದುಗಳನ್ನು ಹತ್ಯೆ ಮಾಡುತ್ತಿರುವ ಉಗ್ರರ ವಿರುದ್ಧ ನಾವು ಧ್ವನಿಯೆತ್ತಲೇಬೇಕು. ನಮ್ಮವರಿಗೆ ಅನ್ಯಾಯವಾದಾಗ ಧ್ವನಿ ಎತ್ತಲು ಭಯಬೇಡ. ನಮ್ಮ ದೇಶ, ನಮ್ಮ ಸುತ್ತಮುತ್ತ, ನಮ್ಮ ಸಮಾಜದಲ್ಲಿ ಆಗುತ್ತಿರುವ ದೌರ್ಜನ್ಯಗಳನ್ನು ಪ್ರತಿಭಟಿಸಲು ಭಯಪಟ್ಟರೆ ನಾವು ಕಲಿತ ವಿದ್ಯೆ ನಿರರ್ಥಕ ಎಂದು ಉಪನ್ಯಾಸಕ, ವಾಗ್ಮಿ ಆದರ್ಶ ಗೋಖಲೆ ಹೇಳಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಶ್ಮೀರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮಾತನಾಡಿದ ಅವರು ಕಾಶ್ಮೀರವು ನಮ್ಮ ಪೂರ್ವಿಕ ಕಶ್ಯಪ ಋಷಿಯ ಭೂಮಿ. ಆದ್ದರಿಂದ ನಮಗೆ ಆ ಭೂಮಿಯ ಮೇಲೆ ಹಕ್ಕಿದೆ. ನಮ್ಮ ನೆಲದಲ್ಲಿ ನಮ್ಮವರಿಗೆ ಅನ್ಯಾಯವಾದರೆ ಅದನ್ನು ಪ್ರತಿಭಟಿಸಲೇಬೇಕಾಗಿದೆ. ಕಾಶ್ಮೀರವು ಅಲಂಕಾರ ಶಾಸ್ತ್ರ, ವ್ಯಾಕರಣ ವೇದಶಾಸ್ತ್ರಗಳನ್ನು ಜಗತ್ತಿಗೆ ಸಾರಿದ ಹಾಗೂ ಶಂಕರಾಚಾರ್ಯರು ಶಾರದಾ ಮಾತೆಯನ್ನು ಪೂಜಿಸಿದ ಪುಣ್ಯ ನೆಲ. ಅಲ್ಲಿಯ ಮೂಲನಿವಾಸಿಗಳಾದ ಪಂಡಿತರು ಇಂದು ಅನಾಥರಾಗಿದ್ದಾರೆ. ದೇಶಕ್ಕಾಗಿ ತಮ್ಮನ್ನು ಮುಡಿಪಾಗಿಟ್ಟ ಜನ ಇಂದು ಹೆದರಿಕೊಂಡು ಬದುಕುವ ಪರಿಸ್ಥಿತಿ ಎದುರಾಗಿದೆ. ಕಾಶ್ಮೀರದ ಒಳಿತಿಗಾಗಿ ಶ್ರಮಿಸುತ್ತಿರುವ ಸೈನಿಕರು ಹೀನಾಯ ಸ್ಥಿತಿಯನ್ನು ಅನುಭವಿಸುತ್ತಿದ್ದಾರೆ ಇಂತಹ ಪರಿಸ್ಥಿತಿಗಳನ್ನು ನೋಡಿ ಸುಮ್ಮನಿರದೆ ನಾವು ಧೈರ್ಯದಿಂದ ಧ್ವನಿ ಎತ್ತಲು ಮುಂದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಅನ್ಯಾಯವನ್ನು ಪ್ರತಿಭಟಿಸಲು ನಾವೆಲ್ಲರು ಸನ್ನದ್ಧರಾಗಬೇಕು. ನಮ್ಮ ಧರ್ಮ ಸಂಸ್ಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ. ಇದು ವಿದ್ಯಾರ್ಥಿದೆಸೆಯಿಂದಲೇ ಪ್ರಾರಂಭವಾಗಬೇಕು. ವಿದ್ಯಾರ್ಥಿಗಳಲ್ಲಿ ನಮ್ಮ ಸಮಾಜಕ್ಕಾಗಿ ದೇಶಕ್ಕಾಗಿ ನಮ್ಮವರಿಗಾಗಿ ಶ್ರಮಿಸುವಂತಹ ಸದ್ಗುಣಗಳು ಬೆಳೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ವಾಗ್ಮಿ ಶ್ರೀಕೃಷ್ಣ ಉಪಾಧ್ಯಯ, ಕಾಲೇಜಿನ ಪ್ರಾಂಶುಪಾಲ ಶಂಕರನಾರಾಯಣ ಭಟ್ ಅಂಬಿಕಾ ವಿದ್ಯಾಲಯದ (ಸಿಬಿಎಸ್‍ಇ) ಪ್ರಾಂಶುಪಾಲೆ ಮಾಲತಿ ಡಿ ಹಾಗೂ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಾಶ್ವಿತ ಡಿ.ಎಂ. ನಿರೂಪಿಸಿ, ವಂದನಾರ್ಪಣೆಗೈದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

23 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago