Advertisement
MIRROR FOCUS

ಶಾಲಾ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆ..? | NCERT ಸಮಿತಿ ಶಿಫಾರಸು | ಶಾಲಾ ಗೋಡೆಗಳ ಮೇಲೆ ಸಂವಿಧಾನದ ಪೀಠಿಕೆ |

Share

ಒಳ್ಳೆಯ ವಿಷಯ ಯಾವುದೇ ಇರಲಿ. ಅದು ಮಕ್ಕಳಿಗೆ(Children) ಸಣ್ಣ ವಯಸ್ಸಲ್ಲೇ ತಿಳಿಯಬೇಕು. ನಮ್ಮ ದೇಶದ ಸಂಸೃತಿಯನ್ನು ಸಾರುವ ಮಹಾಕಾವ್ಯ ರಾಮಾಯಣ(Ramayana) ಹಾಗೂ ಮಹಾಭಾರತದ(Mahabharata) ಬಗ್ಗೆ ಅದೆಷ್ಟೋ ಮಂದಿ ತಿಳಿದೇ ಇಲ್ಲ. ಈ ಬಗ್ಗೆ ಶಾಲಾ ಶಿಕ್ಷಣದಲ್ಲೇ(School Education) ಮಾಹಿತಿ ದೊರೆತರೆ ಒಳ್ಳೆಯದು. ಇದನ್ನು ಮನಗಂಡು ಹೊಸ ಪಠ್ಯಕ್ರಮದ ಅನುಸಾರ ಪಠ್ಯಪುಸ್ತಕಗಳನ್ನು(Text book) ಪರಿಷ್ಕರಿಸಲು ರಚಿಸಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಮಂಡಳಿ( NCERT) ಇದೀಗ ಮಹತ್ವದ ಶಿಫಾರಸು(recommend) ಮಾಡಿದೆ. ಶಾಲಾ ಪಠ್ಯಪುಸ್ತಕದಲ್ಲಿ ಶ್ರೀ ರಾಮಾಯಣ ಹಾಗೂ ಮಹಾಭಾರತ ವಿಷಯಗಳ ಸೇರ್ಪಡೆಗೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.  ಇದೇ ವೇಳೆ ಶಾಲಾ ಗೋಡೆಗಳ ಮೇಲೆ ಸಂವಿಧಾನದ ಪೀಠಿಕೆಯನ್ನು(Preamble of the Constitution)ಬರೆಯುಂತೆ ಶಿಫಾರಸು ಮಾಡಿದೆ.

ಕಳೆದ ವರ್ಷ ಏಳು ಸದಸ್ಯರ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಗೆ ಈ ಸಮಿತಿ ಹಲವು ಶಿಫಾರಸು ನೀಡಿದೆ. ಸಮಿತಿ ಶಿಫಾರಸು ಮಾಡಿದ ಅಂಶಗಳನ್ನು 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಹಾಗೂ ಬೋಧನಾ ಕಲಿಕಾ ಸಾಮಾಗ್ರಿ ಸಮಿತಿ ಪರಿಶೀಲನೆ ನಡೆಸಿ ಪರಿಗಣಿಸಲಿದೆ.  ಶ್ರೀರಾಮಾಯಣ ಹಾಗೂ ಮಹಾಭಾರತ ಕಾವ್ಯಗಳನ್ನು ಪಠ್ಯದಲ್ಲಿ ಸೇರಿಸುವ ಜೊತೆ ಮೌಲ್ಯಗಳನ್ನು ತಿಳಿಸುವ ಪ್ರಯತ್ನವಾಗಬೇಕು. ಮಕ್ಕಳ ಮೌಲ್ಯಯುತ ಜೀವನಕ್ಕೆ ಶ್ರೀ ರಾಮಾಯಣ ಹಾಗೂ ಮಹಾಭಾರತ ಕಾವ್ಯಗಳು ಅವಶ್ಯಕವಾಗಿದೆ ಎಂದು ಸಮಿತಿಯ ಮುಖ್ಯಸ್ಥ ಸಿಐ ಐಸಾಕ್ ಹೇಳಿದ್ದಾರೆ.

7 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಮಾಯಣ ಹಾಗೂ ಮಹಾಭಾರತ ಮಹಾಕಾವ್ಯಗಳನ್ನು ಪಠ್ಯದಲ್ಲಿ ಸೇರಿಸುವಂತೆ ಸಮಿತಿ ಶಿಫಾರಸು ಮಾಡಿದೆ. ವಿದ್ಯಾರ್ಥಿಗಳಲ್ಲಿ ಸ್ವಾಭಿಮಾನ, ದೇಶಭಕ್ತಿ, ದೇಶದ ಬಗ್ಗೆ ಗೌರವ ಹಾಗೂ ಹೆಮ್ಮೆಯನ್ನು ಬೆಳೆಸುವಲ್ಲಿ  ಈ ಮಹಾಕಾವ್ಯಗಳು ನೆರವಾಗಲಿದೆ. ಭಾರತೀಯರು ತಮ್ಮ ಬೇರುಗಳನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ದೇಶ, ಸಂಸ್ಕೃತಿ ಬಗ್ಗೆ ಪ್ರೀತಿ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದು ಐಸಾಕ್ ಹೇಳಿದ್ದಾರೆ.

ಹೊಸ ಪಠ್ಯಕ್ರಮದ ಅನುಸಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ ರಚಿಸಿರುವ ಹೊಸ ಸಮಿತಿಯಲ್ಲಿ ಬೆಂಗಳೂರಿನ ಇನ್ಫೋಸಿಸ್ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ, ದಕ್ಷಿಣ ಕನ್ನಡ ಮೂಲದ ಸಂಸ್ಕೃತ ಶಿಕ್ಷಣ ತಜ್ಞ ಚಾ ಮು ಕೃಷ್ಣಶಾಸ್ತ್ರಿ, ಖ್ಯಾತ ಗಾಯಕ ಶಂಕರ್‌ ಮಹಾದೇವನ್‌, ಅರ್ಥಶಾಸ್ತ್ರಜ್ಞ ಸಂಜೀವ್‌ ಸನ್ಯಾಲ್‌ ಸೇರಿದಂತೆ ಹಲವು ಗಣ್ಯರಿದ್ದಾರೆ. ವಿಜ್ಞಾನ ಕುರಿತ ಉನ್ನತ ಮಟ್ಟದ ಸಮಿತಿಯೊಂದು ಇತ್ತೀಚೆಗೆ ಶಾಲಾ ಪಠ್ಯದಲ್ಲಿ ಇಂಡಿಯಾ ಬದಲು ಭಾರತ ಎಂದು ಉಲ್ಲೇಖಿಸಲು ಎನ್‌ಸಿಇಆರ್‌ಟಿಗೆ ಶಿಫಾರಸು ಮಾಡಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

The National Council of Educational Research and Training (NCERT), which has been formed to revise the textbooks according to the new syllabus, has now made an important recommendation. It has recommended to the government to include Sri Ramayana and Mahabharata in school textbooks. At the same time, it is recommended to write the Preamble of the Constitution on the school walls.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

4 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

4 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

14 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago