ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಆರಂಭಿಸಿದೆ. ಹಬ್ಬದ ವೇಳೆ ವಾರಾಂತ್ಯವು ಒಟ್ಟಾಗಿ ಬಂದಿರುವುದರಿಂದ ರಾಜ್ಯ ಮತ್ತು ಅಂತಾರಾಜ್ಯ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಈ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹಬ್ಬದ ನಂತರವೂ ಇದೇ 14 ಮತ್ತು 15 ರಂದು ಈ ಹೆಚ್ಚುವರಿ ಬಸ್ಸುಗಳ ಸಂಚಾರ ಇರುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಅಂದಾಜು 114 ಹೆಚ್ಚುವರಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ಮಾಹಿತಿ ನೀಡಲಾಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…