Advertisement
ಸುದ್ದಿಗಳು

ರಾಜ್ಯಕ್ಕೆ ಹೆಚ್ಚುವರಿ 941 ಕೋಟಿ ರೂ ಹಣಕಾಸು ನೆರವು ಘೋಷಿಸಿದ ಕೇಂದ್ರ | ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ ಅಡಿಯಲ್ಲಿ ಅನುದಾನ |

Share

ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ  941.04 ಕೋಟಿ ರೂ. ಹೆಚ್ಚುಚವರಿ ಅನುದಾನ ಘೋಷಿಸಿದೆ. ಅಸ್ಸಾಂ, ಹಿಮಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್​ಗಳಿಗೂ ಹೆಚ್ಚುವರಿ ಅನುದಾನ ಘೋಷಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಐದು ರಾಜ್ಯಗಳಿಗೆ ಒಟ್ಟು 1,816.162 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

2022ರಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತ, ಮೇಘಸ್ಫೋಟ ಮತ್ತಿತರ ಪ್ರಾಕೃತಿಕ ವಿಪತ್ತುಗಳನ್ನು ಗಮನದಲ್ಲಿಟ್ಟುಕೊಂಡು ಈ ಅನುದಾನ ಘೋಷಿಸಲಾಗಿದೆ. ಪ್ರಾಕೃತಿಕ ವಿಕೋಪಗಳನ್ನು ಎದುರಿಸಿದ ಐದು ರಾಜ್ಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಹೊಂದಿರುವ ಒಲವನ್ನು ಇದು ತೋರಿಸಿಕೊಟ್ಟಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

 ಕರ್ನಾಟಕಕ್ಕೇ ಹೆಚ್ಚು ಅನುದಾನ: ಕರ್ನಾಟಕಕ್ಕೆ 941.04 ಕೋಟಿ ರೂ, ಅಸ್ಸಾಂಗೆ 520.466 ಕೋಟಿ ರೂ, ಹಿಮಾಚಲ ಪ್ರದೇಶಕ್ಕೆ 239.3 ಕೋಟಿ ರೂ, ಮೇಘಾಲಯಕ್ಕೆ 47.326 ಕೋಟಿ ರೂ, ನಾಗಾಲ್ಯಾಂಡ್​ಗೆ 68.02 ಕೋಟಿ ರೂ. ದೊರೆಯಲಿದೆ.

ಈ ಹೆಚ್ಚುವರಿ ನೆರವು ಈಗಾಗಲೇ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಲ್ಲಿ (Sಆಖಈ) ಮೀಸಲಿಟ್ಟಿರುವುದನ್ನು ಹೊರತುಪಡಿಸಿದ್ದಾಗಿದೆ. 2022-23ನೇ ಸಾಲಿನಲ್ಲಿ 25 ರಾಜ್ಯಗಳಿಗೆ ಎಸ್​​ಡಿಆರ್​ಎಫ್ ಅಡಿ 15,770.40 ಕೋಟಿ ರೂ ಹಾಗೂ ಎನ್​ಡಿಆರ್​​ಎಫ್ ಅಡಿ ನಾಲ್ಕು ರಾಜ್ಯಗಳಿಗೆ 502.744 ಕೋಟಿ ರೂ. ಅನುದಾನ ನೀಡಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಹೆಚ್ಚುವರಿ ಅನುದಾನ ಘೋಷಿಸಿರುವುದು ಗಮನಾರ್ಹ.

ಕೇಂದ್ರ ಸರ್ಕಾರ ಉತ್ತರದ ರಾಜ್ಯಗಳಿಗೆ ವಿಶೇಷ ಹಣಕಾಸು ಅನುದಾನಗಳನ್ನು ನೀಡುತ್ತಿದ್ದು, ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂಬ ಆರೋಪಗಳಿವೆ. ಜಿಎಸ್​ಟಿ ಪಾಲು ವಿಚಾರದಲ್ಲಿಯೂ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅನೇಕ ಬಾರಿ ಆಕ್ರೋಶ ವ್ಯಕ್ತಪಡಿಸಿವೆ. ಈ ಎಲ್ಲೆ ಬೆಳವಣಿಗೆಗಳ ಮಧ್ಯೆಯೇ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿ ಹಠಾತ್ ನಿರ್ಧಾರ ಕೈಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

3 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

16 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

20 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago