Advertisement
ಸುದ್ದಿಗಳು

ರಾಜ್ಯಕ್ಕೆ ಹೆಚ್ಚುವರಿ 941 ಕೋಟಿ ರೂ ಹಣಕಾಸು ನೆರವು ಘೋಷಿಸಿದ ಕೇಂದ್ರ | ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ ಅಡಿಯಲ್ಲಿ ಅನುದಾನ |

Share

ರಾಷ್ಟ್ರೀಯ ವಿಪತ್ತು ನಿರ್ವಹಣೆ ನಿಧಿ ಅಡಿಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ  941.04 ಕೋಟಿ ರೂ. ಹೆಚ್ಚುಚವರಿ ಅನುದಾನ ಘೋಷಿಸಿದೆ. ಅಸ್ಸಾಂ, ಹಿಮಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್​ಗಳಿಗೂ ಹೆಚ್ಚುವರಿ ಅನುದಾನ ಘೋಷಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಐದು ರಾಜ್ಯಗಳಿಗೆ ಒಟ್ಟು 1,816.162 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

2022ರಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತ, ಮೇಘಸ್ಫೋಟ ಮತ್ತಿತರ ಪ್ರಾಕೃತಿಕ ವಿಪತ್ತುಗಳನ್ನು ಗಮನದಲ್ಲಿಟ್ಟುಕೊಂಡು ಈ ಅನುದಾನ ಘೋಷಿಸಲಾಗಿದೆ. ಪ್ರಾಕೃತಿಕ ವಿಕೋಪಗಳನ್ನು ಎದುರಿಸಿದ ಐದು ರಾಜ್ಯಗಳ ಜನರಿಗೆ ಸಹಾಯ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಹೊಂದಿರುವ ಒಲವನ್ನು ಇದು ತೋರಿಸಿಕೊಟ್ಟಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

 ಕರ್ನಾಟಕಕ್ಕೇ ಹೆಚ್ಚು ಅನುದಾನ: ಕರ್ನಾಟಕಕ್ಕೆ 941.04 ಕೋಟಿ ರೂ, ಅಸ್ಸಾಂಗೆ 520.466 ಕೋಟಿ ರೂ, ಹಿಮಾಚಲ ಪ್ರದೇಶಕ್ಕೆ 239.3 ಕೋಟಿ ರೂ, ಮೇಘಾಲಯಕ್ಕೆ 47.326 ಕೋಟಿ ರೂ, ನಾಗಾಲ್ಯಾಂಡ್​ಗೆ 68.02 ಕೋಟಿ ರೂ. ದೊರೆಯಲಿದೆ.

ಈ ಹೆಚ್ಚುವರಿ ನೆರವು ಈಗಾಗಲೇ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಲ್ಲಿ (Sಆಖಈ) ಮೀಸಲಿಟ್ಟಿರುವುದನ್ನು ಹೊರತುಪಡಿಸಿದ್ದಾಗಿದೆ. 2022-23ನೇ ಸಾಲಿನಲ್ಲಿ 25 ರಾಜ್ಯಗಳಿಗೆ ಎಸ್​​ಡಿಆರ್​ಎಫ್ ಅಡಿ 15,770.40 ಕೋಟಿ ರೂ ಹಾಗೂ ಎನ್​ಡಿಆರ್​​ಎಫ್ ಅಡಿ ನಾಲ್ಕು ರಾಜ್ಯಗಳಿಗೆ 502.744 ಕೋಟಿ ರೂ. ಅನುದಾನ ನೀಡಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಹೆಚ್ಚುವರಿ ಅನುದಾನ ಘೋಷಿಸಿರುವುದು ಗಮನಾರ್ಹ.

ಕೇಂದ್ರ ಸರ್ಕಾರ ಉತ್ತರದ ರಾಜ್ಯಗಳಿಗೆ ವಿಶೇಷ ಹಣಕಾಸು ಅನುದಾನಗಳನ್ನು ನೀಡುತ್ತಿದ್ದು, ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂಬ ಆರೋಪಗಳಿವೆ. ಜಿಎಸ್​ಟಿ ಪಾಲು ವಿಚಾರದಲ್ಲಿಯೂ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅನೇಕ ಬಾರಿ ಆಕ್ರೋಶ ವ್ಯಕ್ತಪಡಿಸಿವೆ. ಈ ಎಲ್ಲೆ ಬೆಳವಣಿಗೆಗಳ ಮಧ್ಯೆಯೇ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿ ಹಠಾತ್ ನಿರ್ಧಾರ ಕೈಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

9 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago