ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel