The Rural Mirror ವಾರದ ವಿಶೇಷ

ಏಕಕಾಲಕ್ಕೆ ಎರಡು ಕೈಗಳಿಂದ ಬರೆದ ಬಾಲಕಿ | ಸುಳ್ಯದ ಬಾಲಕಿ ಮಾಡಿದ ವರ್ಲ್ಡ್‌ ರೆಕಾರ್ಡ್‌

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಒಂದು ಕೈಯಲ್ಲಿ ಈಗ ಬರೆಯುವುದೇ ಕಷ್ಟ. ಆದರೆ ಎರಡೂ ಕೈಗಳಲ್ಲಿ  ಏಕಕಾಲಕ್ಕೆ ಒಂದು ನಿಮಿಷಕ್ಕೆ ೪೦ ಶಬ್ದ ಬರೆದು ಉತ್ತರ ಪ್ರದೇಶದ ಲಾಟಾ ಫೌಂಡೇಶನ್‌ನ ಎಕ್ಸ್‌ಕ್ಲೂಸಿವ್ ವರ್ಲ್ಡ್‌ ರೆಕಾರ್ಡ್‌ ಮಾಡಿದ್ದಾಳೆ ಸುಳ್ಯದ ಬಾಲಕಿ ಆದಿ ಸ್ವರೂಪ.

Advertisement

ವಿಜ್ಞಾನದ ಪ್ರಕಾರ ಒಬ್ಬ ಮನುಷ್ಯ ಒಂದು ನಿಮಿಷದಲ್ಲಿ  ಸಾಧಾರಣವಾಗಿ ೨೦ ಶಬ್ದ ಬರೆಯುತ್ತಾನೆ. ಆದರೆ ಸುಳ್ಯದ ಆದಿ ಸ್ವರೂಪ ತನ್ನ ಎರಡು ಕೈಗಳಿಂದ ಏಕಕಾಲಕ್ಕೆ ೫೦ ಶಬ್ದ ಬರೆದಿದ್ದಾಳೆ. ಅದೂ ವಿರುದ್ಧ ದಿಕ್ಕಿನಲ್ಲಿ.  ಮಾತ್ರವಲ್ಲ ಎರಡು ಭಾಷೆಗಳನ್ನೂ ಏಕಕಾಲಕ್ಕೆ ಬರೆದಿದ್ದಾಳೆ. ಒಂದು ಕೈಯಿಂದ ಕನ್ನಡ ಇನ್ನೊಂದು ಕೈಯಿಂದ ಇಂಗ್ಲಿಷ್‌ ಬರೆಯುತ್ತಾಳೆ. ಹೀಗೇ ವಿವಿಧ ರೀತಿಯಲ್ಲಿ  ವಿಶೇಷವಾಗಿ  ಬರೆಯುತ್ತಾಳೆ ಆದಿ ಸ್ವರೂಪ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮೂಲದ ಆದಿ ಸ್ವರೂಪ ಈ ವಿಶೇಷ ಸಾಧನೆಗೆ  ಉತ್ತರ ಪ್ರದೇಶದ ಲಾಟಾ ಫೌಂಡೇಶನ್‌ನ ಎಕ್ಸ್‌ಕ್ಲೂಸಿವ್ ವರ್ಲ್ಡ್‌ ರೆಕಾರ್ಡ್‌ ಮಾಡಿದ್ದಾಳೆ. ಮುಂದೆ ಗಿನ್ನೆಸ್‌ ವಿಶ್ವ ದಾಖಲೆ ಮಾಡಬೇಕೆಂಬ ಬಯಕೆ ಹೊಂದಿರುವ ಆದಿ ನಿರಂತರ ಅಭ್ಯಾಸದಿಂದ ಈಗ ನಿಮಿಷಕ್ಕೆ 50 ಶಬ್ದಗಳನ್ನು ಬರೆಯಬಲ್ಲಳು. ಕಳೆದ ಎರಡು ವರ್ಷಗಳಿಂದ ಈ ರೀತಿಯ ಬರವಣಿಗೆಯನ್ನು ಅಭ್ಯಾಸ ಮಾಡುತ್ತಿರುವ ಈಕೆ ಒಟ್ಟು 10 ವಿಭಿನ್ನ ರೀತಿಯಲ್ಲಿ ಒಂದೇ ಸಮಯದಲ್ಲಿ ಎರಡು ಕೈ ಉಪಯೋಗಿಸಿಕೊಂಡು ಬರೆಯುವುದನ್ನು ಕರಗತ ಮಾಡಿಕೊಂಡಿದ್ದಾಳೆ.

ಕಲಾವಿದ ಹಾಗೂ ಸ್ವರೂಪ ಅಧ್ಯಯನ ಕೇಂದ್ರದ  ಗೋಪಾಡ್ಕರ್‌ ಅವರ ಮಗಳಾದ ಸ್ವರೂಪ ವಿವಿಧ ಸೃಜನಾತ್ಮಕ ಕೆಲಸಗಳಲ್ಲಿ  ತೊಡಗಿಸಿಕೊಂಡಿದ್ದಾಳೆ.  ಬರಹಗಳಲ್ಲಿ ಯುನಿ ಡೈರೆಕ್ಷನ್, ಲೆಫ್ಟ್ ಹ್ಯಾಂಡ್ ಸ್ಪೀಡ್, ರೈಟ್ ಹ್ಯಾಂಡ್ ಸ್ಪೀಡ್, ರಿವರ್ಸ್ ರನ್ನಿಂಗ್, ಮಿರರ್ ಇಮೇಜ್, ಹೆಟೆರೊ ಟಾಪಿಕ್, ಹೆಟೆರೊ ಲಿಂಗ್ವಿಸ್ಟಿಕ್‌, ಎಕ್ಸ್ಚೇಂಜ್, ಡ್ಯಾನ್ಸಿಂಗ್, ಮತ್ತು ಬ್ಲೈಂಡ್ ಫೋಲ್ಡಿಂಗ್ ಹೀಗೇ ಬೇರೇ ಬೇರೆ ರೀತಿಯಲ್ಲಿ  ಬರೆಯುತ್ತಾಳೆ. ಅದರ ಜೊತೆಗೆ ವಿವಿಧ ಕಲೆ, ಸಾಂಸ್ಕೃತಿಕವಾಗಿಯೂ ತೊಡಗಿಸಿಕೊಂಡಿದ್ದಾಳೆ.

ಒಂದೂವರೆ ವರ್ಷದವಳಿದ್ದಾಗಲೆ ಓದುತ್ತಿದ್ದಳು, ಎರಡೂವರೆ ವರ್ಷಕ್ಕೆ ದಿನಕ್ಕೆ 30 ಪುಟ ಬರೆಯುತ್ತಿದ್ದಳು ಎನ್ನುತ್ತಾರೆ
ಗೋಪಾಡ್ಕರ್‌.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

9 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

9 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

14 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

23 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

23 hours ago