The Rural Mirror ವಾರದ ವಿಶೇಷ

ಏಕಕಾಲಕ್ಕೆ ಎರಡು ಕೈಗಳಿಂದ ಬರೆದ ಬಾಲಕಿ | ಸುಳ್ಯದ ಬಾಲಕಿ ಮಾಡಿದ ವರ್ಲ್ಡ್‌ ರೆಕಾರ್ಡ್‌

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಒಂದು ಕೈಯಲ್ಲಿ ಈಗ ಬರೆಯುವುದೇ ಕಷ್ಟ. ಆದರೆ ಎರಡೂ ಕೈಗಳಲ್ಲಿ  ಏಕಕಾಲಕ್ಕೆ ಒಂದು ನಿಮಿಷಕ್ಕೆ ೪೦ ಶಬ್ದ ಬರೆದು ಉತ್ತರ ಪ್ರದೇಶದ ಲಾಟಾ ಫೌಂಡೇಶನ್‌ನ ಎಕ್ಸ್‌ಕ್ಲೂಸಿವ್ ವರ್ಲ್ಡ್‌ ರೆಕಾರ್ಡ್‌ ಮಾಡಿದ್ದಾಳೆ ಸುಳ್ಯದ ಬಾಲಕಿ ಆದಿ ಸ್ವರೂಪ.

Advertisement
Advertisement

ವಿಜ್ಞಾನದ ಪ್ರಕಾರ ಒಬ್ಬ ಮನುಷ್ಯ ಒಂದು ನಿಮಿಷದಲ್ಲಿ  ಸಾಧಾರಣವಾಗಿ ೨೦ ಶಬ್ದ ಬರೆಯುತ್ತಾನೆ. ಆದರೆ ಸುಳ್ಯದ ಆದಿ ಸ್ವರೂಪ ತನ್ನ ಎರಡು ಕೈಗಳಿಂದ ಏಕಕಾಲಕ್ಕೆ ೫೦ ಶಬ್ದ ಬರೆದಿದ್ದಾಳೆ. ಅದೂ ವಿರುದ್ಧ ದಿಕ್ಕಿನಲ್ಲಿ.  ಮಾತ್ರವಲ್ಲ ಎರಡು ಭಾಷೆಗಳನ್ನೂ ಏಕಕಾಲಕ್ಕೆ ಬರೆದಿದ್ದಾಳೆ. ಒಂದು ಕೈಯಿಂದ ಕನ್ನಡ ಇನ್ನೊಂದು ಕೈಯಿಂದ ಇಂಗ್ಲಿಷ್‌ ಬರೆಯುತ್ತಾಳೆ. ಹೀಗೇ ವಿವಿಧ ರೀತಿಯಲ್ಲಿ  ವಿಶೇಷವಾಗಿ  ಬರೆಯುತ್ತಾಳೆ ಆದಿ ಸ್ವರೂಪ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮೂಲದ ಆದಿ ಸ್ವರೂಪ ಈ ವಿಶೇಷ ಸಾಧನೆಗೆ  ಉತ್ತರ ಪ್ರದೇಶದ ಲಾಟಾ ಫೌಂಡೇಶನ್‌ನ ಎಕ್ಸ್‌ಕ್ಲೂಸಿವ್ ವರ್ಲ್ಡ್‌ ರೆಕಾರ್ಡ್‌ ಮಾಡಿದ್ದಾಳೆ. ಮುಂದೆ ಗಿನ್ನೆಸ್‌ ವಿಶ್ವ ದಾಖಲೆ ಮಾಡಬೇಕೆಂಬ ಬಯಕೆ ಹೊಂದಿರುವ ಆದಿ ನಿರಂತರ ಅಭ್ಯಾಸದಿಂದ ಈಗ ನಿಮಿಷಕ್ಕೆ 50 ಶಬ್ದಗಳನ್ನು ಬರೆಯಬಲ್ಲಳು. ಕಳೆದ ಎರಡು ವರ್ಷಗಳಿಂದ ಈ ರೀತಿಯ ಬರವಣಿಗೆಯನ್ನು ಅಭ್ಯಾಸ ಮಾಡುತ್ತಿರುವ ಈಕೆ ಒಟ್ಟು 10 ವಿಭಿನ್ನ ರೀತಿಯಲ್ಲಿ ಒಂದೇ ಸಮಯದಲ್ಲಿ ಎರಡು ಕೈ ಉಪಯೋಗಿಸಿಕೊಂಡು ಬರೆಯುವುದನ್ನು ಕರಗತ ಮಾಡಿಕೊಂಡಿದ್ದಾಳೆ.

ಕಲಾವಿದ ಹಾಗೂ ಸ್ವರೂಪ ಅಧ್ಯಯನ ಕೇಂದ್ರದ  ಗೋಪಾಡ್ಕರ್‌ ಅವರ ಮಗಳಾದ ಸ್ವರೂಪ ವಿವಿಧ ಸೃಜನಾತ್ಮಕ ಕೆಲಸಗಳಲ್ಲಿ  ತೊಡಗಿಸಿಕೊಂಡಿದ್ದಾಳೆ.  ಬರಹಗಳಲ್ಲಿ ಯುನಿ ಡೈರೆಕ್ಷನ್, ಲೆಫ್ಟ್ ಹ್ಯಾಂಡ್ ಸ್ಪೀಡ್, ರೈಟ್ ಹ್ಯಾಂಡ್ ಸ್ಪೀಡ್, ರಿವರ್ಸ್ ರನ್ನಿಂಗ್, ಮಿರರ್ ಇಮೇಜ್, ಹೆಟೆರೊ ಟಾಪಿಕ್, ಹೆಟೆರೊ ಲಿಂಗ್ವಿಸ್ಟಿಕ್‌, ಎಕ್ಸ್ಚೇಂಜ್, ಡ್ಯಾನ್ಸಿಂಗ್, ಮತ್ತು ಬ್ಲೈಂಡ್ ಫೋಲ್ಡಿಂಗ್ ಹೀಗೇ ಬೇರೇ ಬೇರೆ ರೀತಿಯಲ್ಲಿ  ಬರೆಯುತ್ತಾಳೆ. ಅದರ ಜೊತೆಗೆ ವಿವಿಧ ಕಲೆ, ಸಾಂಸ್ಕೃತಿಕವಾಗಿಯೂ ತೊಡಗಿಸಿಕೊಂಡಿದ್ದಾಳೆ.

Advertisement
ಒಂದೂವರೆ ವರ್ಷದವಳಿದ್ದಾಗಲೆ ಓದುತ್ತಿದ್ದಳು, ಎರಡೂವರೆ ವರ್ಷಕ್ಕೆ ದಿನಕ್ಕೆ 30 ಪುಟ ಬರೆಯುತ್ತಿದ್ದಳು ಎನ್ನುತ್ತಾರೆ
ಗೋಪಾಡ್ಕರ್‌.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

1 hour ago

ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು

ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…

20 hours ago

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 days ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 days ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 days ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago