ವಿಟ್ಲ :ಯುವಕರು ಕೃಷಿಯತ್ತ ವಾಲುತ್ತಿರುವುದರಿಂದ ಕೃಷಿಗೆ ಅತ್ಯುತ್ತಮ ಭವಿಷ್ಯವಿದೆ. ಕೃಷಿಕಾರ್ಯದಲ್ಲಿ ವಿದ್ಯಾವಂತರು ಭಾಗವಹಿಸಿದಾಗ ಹೊಸ ಅವಿಷ್ಕಾರಗಳ ಜತೆಗೆ ಮನ್ನಣೆ ಸಿಗಲು ಸಾಧ್ಯ. ವಿದ್ಯಾವಂತ ಸಮಾಜ ಕೃಷಿಗೆ ಬಂದಾಗ ವ್ಯಕ್ತಿಗೂ , ವೃತ್ತಿಗೂ , ಹಣಕ್ಕೂ ಹೆಚ್ಚು ಗೌರವ ಬರುತ್ತದೆ ಎಂದು ಮಲೆನಾಡು ಕೃಷಿಕ ಸಮುದಾಯ ಸಂಘಟನೆ ಅಧ್ಯಕ್ಷ ಸತ್ಯನಾರಾಯಣ ಕೂಳೂರು ಹೇಳಿದರು.
ಶಿಬಿರ ನಿರ್ದೇಶಕ ಕ್ಯಾಂಪ್ಕೋ ಉಪಾಧ್ಯಕ್ಷ ಶಂ. ನಾ. ಖಂಡಿಗೆ ಮಾತನಾಡಿ ಶಿಬಿರಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯವನ್ನು ಸಂಪನ್ಮೂಲ ವ್ಯಕ್ತಿಗಳು ಮಾಡಿದ್ದಾರೆ. ಅಪಘಾತ ವಿಮೆ ಸೇರಿ ವಿವಿಧ ಸವಲತ್ತುಗಳನ್ನು ಕ್ಯಾಂಪ್ಕೋ ವತಿಯಿಂದ ಶಿಬಿರಾರ್ಥಿಗಳಿಗೆ ಮಾಡಲಾಗಿದೆ. 19ಮಂದಿಯನ್ನು ತರಬೇತಿಗೊಳಿಸಿದ್ದು, ಸಹಕಾರಿ ಸಂಘಗಳು ಇದನ್ನು ಮುಂದುವರಿಸಬೇಕು. ದೋಟಿ ಆಂದೋಲನವಾಗಿ ಎಲ್ಲಾ ಕಡೆ ಪಸರಿಸಬೇಕು ಎಂದು ತಿಳಿಸಿದರು.
ಶಿಬಿರಾರ್ಥಿಗಳಾದ ಐವರ್ನಾಡು ನಿವಾಸಿ ವಚನ್ ಕುಮಾರ್, ಬೆಳ್ಳಾರೆ ನಿವಾಸಿ ಬಾಲಕೃಷ್ಣ, ಮಂಗಳೂರು ನಿವಾಸಿ ಎರೌನ್ ರೋಶನ್ ಡಿಮೆಲ್ಲೊ ಅಭಿಪ್ರಾಯ ಹಂಚಿಕೊಂಡರು. 19ಮಂದಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳನ್ನು ಗೌರವಿಸಲಾಯಿತು. ಸಿಪಿಸಿಆರ್ಐ ವಿಟ್ಲದ ವಿಜ್ಞಾನಿ ಡಾ. ಎಲ್ವಿನ್ ಅಪ್ಸರಾ, ಶಿಬಿರದ ಸಂಪನ್ಮೂಲ ವ್ಯಕ್ತಿಗಳಾದ ಮೂರೂರು ಕಲ್ಲಬ್ಬೆ ಭಾಗದ ರಾಜೇಶ್ ಭಟ್, ರಾಜು ಶೆಟ್ಟಿ, ರಮೇಶ್ ಭಟ್, ಮೈಕೆ ಗಣೇಶ್ ಭಟ್, ಕ್ಯಾಂಪ್ಕೋ ನಿರ್ದೇಶಕರಾದ ಎಸ್. ಆರ್. ಸತೀಶ್ಚಂದ್ರ, ರಾಘವೇಂದ್ರ ಭಟ್ ಕೆದಿಲ, ಡಾ. ಜಯಪ್ರಕಾಶ ತೊಟ್ಟೆತ್ತೋಡಿ, ಮಹೇಶ್ ಚೌಟ, ಸತ್ಯನಾರಾಯಣ ಪ್ರಸಾದ್, ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಉಪಸ್ಥಿತರಿದ್ದರು.
ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಶಾಸ್ತ್ರಿ ಸ್ವಾಗತಿಸಿ ಪ್ರಸ್ತಾವನೆಗೈದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು. ಪತ್ರಕರ್ತ ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…