Advertisement
ಅನುಕ್ರಮ

ಆರೋಗ್ಯಾಲಯ | ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗೆ ಮನೆ ಮದ್ದು |

Share

ಮಳೆ, ಬಿಸಿಲು ಬಂದಾಗ ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಒಂದು ಕಡೆಯಾದರೆ, ವಾತಾವರಣದ ಬದಲಾವಣೆಯ ಸಂದರ್ಭದಲ್ಲೂ ಆರೋಗ್ಯದ ಬದಲಾವಣೆ ಇರುತ್ತದೆ. ಇಂತಹ ಸಂದರ್ಭದ ಆರಂಭದಲ್ಲಿ  ಮನೆ ಮದ್ದು ಪರಿಣಾಮಕಾರಿಯಾಗಿರುತ್ತದೆ. ಅದೇನು ?

Advertisement
Advertisement

ಒಣ ಕೆಮ್ಮು ಮತ್ತು ಮನೆ ಮದ್ದು : ಶೀತದ ಕೆಮ್ಮು ಮತ್ತು ಒಣ ಕೆಮ್ಮು. ಶೀತದ ವಿಚಾರದಲ್ಲಿ ಮನುಷ್ಯನಿಗೆ ಎದುರಾಗುವ ಕೆಮ್ಮು, ಮೊದಲು ನೆಗಡಿಯಾಗಿ ಎದೆಯಲ್ಲಿ ಕಫ ಕಟ್ಟಿ ನಂತರ ಕೆಮ್ಮು ಪ್ರಾರಂಭವಾಗುತ್ತದೆ. ಆದರೆ ಒಣ ಕೆಮ್ಮು ಹಾಗಲ್ಲ. ಮೊದಲು ಗಂಟಲು ಕೆರೆತದಿಂದ ಉಂಟಾಗಿ ನಂತರ ಜ್ವರ ಮತ್ತು ಅಲರ್ಜಿಗೆ ಕಾರಣವಾಗುತ್ತದೆ.

1.ಜೇನು :ಇದು ದೊಂದೆಯಲ್ಲಿ ಒಂದು ಪದರವನ್ನು ಮಾಡಿ ದೊಂದೆಯ ಕೆರೆತ ಮತ್ತು ಇನ್ಫೆಕ್ಷನ್ ತಡೆಗಟ್ಟುತ್ತದೆ.ಇದನ್ನು ನೀರಿನೊಡನೆ ಸೇವಿಸಲು ಬಹುದು. ಜೇನನ್ನು 1 ವರ್ಷದ ಒಳಗಿನ ಮಕ್ಕಳಿಗೆ ಕೊಡುವುದು ಅಪಾಯಕಾರಿ. ಜೇನು ತುಪ್ಪದಲ್ಲೂ ಸಹ ಆಂಟಿ – ಬ್ಯಾಕ್ಟೀರಿಯಲ್ ಗುಣ ಲಕ್ಷಣಗಳಿದ್ದು, ಮನುಷ್ಯನ ಆರೋಗ್ಯಕ್ಕೆ ಉಂಟಾಗುವ ಸೋಂಕುಗಳನ್ನು ನಿವಾರಣೆ ಮಾಡುವಲ್ಲಿ ಯಶಸ್ವಿಯಾಗುತ್ತದೆ.

2.ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಇನ್ಫೆಕ್ಷನ್ ತಡೆಗಟ್ಟಲುಬಹುದು.

3.ಶುಂಠಿ : ಶ್ವಾಸನಾಳದ ರಿಫ್ಲೆಕ್ಸ್ ಸಡಿಲಗೊಳಿಸಿ ಕಫವನ್ನು ಹೊರ ಹಾಕಲು ಪ್ರಯತ್ನಿಸುತ್ತದೆ.ಇನ್ಫೆಕ್ಷನ್ ತಡೆಗಟ್ಟುತ್ತದೆ.ಅತಿಯಾದ ಪ್ರಮಾಣ ಬೇಡ ಏಕೆಂದರೆ ಎದೆನೋವು,ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು.

4.ಅರಿಶಿ: ಅರಿಶಿನದಲ್ಲಿ ಅನೇಕ ಔಷಧೀಯ ಗುಣ ಲಕ್ಷಣಗಳಿವೆ. ಶೀತ, ನೆಗಡಿ ತರಹದ ಹಲವಾರು ಸಮಸ್ಯೆಗಳಿಗೆ ಅರಿಶಿನ ಒಳ್ಳೆಯ ಮನೆ ಮದ್ದು. ಕೆಮ್ಮು ಬಂದಾಗ ಹಾಲಿಗೆ ಸ್ವಲ್ಪ ಅರಿಶಿನ ಮಿಶ್ರಣ ಮಾಡಿ ಕುಡಿದರೆ ಒಳ್ಳೆಯ ಉಪಯೋಗವಾಗುತ್ತದೆ.

ದಿನೇ ದಿನೇ ಹೆಚ್ಚಾಗಿ ಬೇರೆ ರೀತಿಯ ರೋಗ ಲಕ್ಷಣಕ್ಕೆ ತಿರುಗಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡದೆ ಮೊದಲು ವೈದ್ಯರನ್ನು ಭೇಟಿಯಾಗಿ ಅವರಿಂದ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.

# ಡಾ.ಆದಿತ್ಯ ಭಟ್‌ ಚಣಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

47 minutes ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago