Advertisement
ಅನುಕ್ರಮ

ಆರೋಗ್ಯಾಲಯ | ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗೆ ಮನೆ ಮದ್ದು |

Share

ಮಳೆ, ಬಿಸಿಲು ಬಂದಾಗ ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಒಂದು ಕಡೆಯಾದರೆ, ವಾತಾವರಣದ ಬದಲಾವಣೆಯ ಸಂದರ್ಭದಲ್ಲೂ ಆರೋಗ್ಯದ ಬದಲಾವಣೆ ಇರುತ್ತದೆ. ಇಂತಹ ಸಂದರ್ಭದ ಆರಂಭದಲ್ಲಿ  ಮನೆ ಮದ್ದು ಪರಿಣಾಮಕಾರಿಯಾಗಿರುತ್ತದೆ. ಅದೇನು ?

ಒಣ ಕೆಮ್ಮು ಮತ್ತು ಮನೆ ಮದ್ದು : ಶೀತದ ಕೆಮ್ಮು ಮತ್ತು ಒಣ ಕೆಮ್ಮು. ಶೀತದ ವಿಚಾರದಲ್ಲಿ ಮನುಷ್ಯನಿಗೆ ಎದುರಾಗುವ ಕೆಮ್ಮು, ಮೊದಲು ನೆಗಡಿಯಾಗಿ ಎದೆಯಲ್ಲಿ ಕಫ ಕಟ್ಟಿ ನಂತರ ಕೆಮ್ಮು ಪ್ರಾರಂಭವಾಗುತ್ತದೆ. ಆದರೆ ಒಣ ಕೆಮ್ಮು ಹಾಗಲ್ಲ. ಮೊದಲು ಗಂಟಲು ಕೆರೆತದಿಂದ ಉಂಟಾಗಿ ನಂತರ ಜ್ವರ ಮತ್ತು ಅಲರ್ಜಿಗೆ ಕಾರಣವಾಗುತ್ತದೆ.

1.ಜೇನು :ಇದು ದೊಂದೆಯಲ್ಲಿ ಒಂದು ಪದರವನ್ನು ಮಾಡಿ ದೊಂದೆಯ ಕೆರೆತ ಮತ್ತು ಇನ್ಫೆಕ್ಷನ್ ತಡೆಗಟ್ಟುತ್ತದೆ.ಇದನ್ನು ನೀರಿನೊಡನೆ ಸೇವಿಸಲು ಬಹುದು. ಜೇನನ್ನು 1 ವರ್ಷದ ಒಳಗಿನ ಮಕ್ಕಳಿಗೆ ಕೊಡುವುದು ಅಪಾಯಕಾರಿ. ಜೇನು ತುಪ್ಪದಲ್ಲೂ ಸಹ ಆಂಟಿ – ಬ್ಯಾಕ್ಟೀರಿಯಲ್ ಗುಣ ಲಕ್ಷಣಗಳಿದ್ದು, ಮನುಷ್ಯನ ಆರೋಗ್ಯಕ್ಕೆ ಉಂಟಾಗುವ ಸೋಂಕುಗಳನ್ನು ನಿವಾರಣೆ ಮಾಡುವಲ್ಲಿ ಯಶಸ್ವಿಯಾಗುತ್ತದೆ.

2.ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಇನ್ಫೆಕ್ಷನ್ ತಡೆಗಟ್ಟಲುಬಹುದು.

3.ಶುಂಠಿ : ಶ್ವಾಸನಾಳದ ರಿಫ್ಲೆಕ್ಸ್ ಸಡಿಲಗೊಳಿಸಿ ಕಫವನ್ನು ಹೊರ ಹಾಕಲು ಪ್ರಯತ್ನಿಸುತ್ತದೆ.ಇನ್ಫೆಕ್ಷನ್ ತಡೆಗಟ್ಟುತ್ತದೆ.ಅತಿಯಾದ ಪ್ರಮಾಣ ಬೇಡ ಏಕೆಂದರೆ ಎದೆನೋವು,ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು.

4.ಅರಿಶಿ: ಅರಿಶಿನದಲ್ಲಿ ಅನೇಕ ಔಷಧೀಯ ಗುಣ ಲಕ್ಷಣಗಳಿವೆ. ಶೀತ, ನೆಗಡಿ ತರಹದ ಹಲವಾರು ಸಮಸ್ಯೆಗಳಿಗೆ ಅರಿಶಿನ ಒಳ್ಳೆಯ ಮನೆ ಮದ್ದು. ಕೆಮ್ಮು ಬಂದಾಗ ಹಾಲಿಗೆ ಸ್ವಲ್ಪ ಅರಿಶಿನ ಮಿಶ್ರಣ ಮಾಡಿ ಕುಡಿದರೆ ಒಳ್ಳೆಯ ಉಪಯೋಗವಾಗುತ್ತದೆ.

ದಿನೇ ದಿನೇ ಹೆಚ್ಚಾಗಿ ಬೇರೆ ರೀತಿಯ ರೋಗ ಲಕ್ಷಣಕ್ಕೆ ತಿರುಗಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡದೆ ಮೊದಲು ವೈದ್ಯರನ್ನು ಭೇಟಿಯಾಗಿ ಅವರಿಂದ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.

# ಡಾ.ಆದಿತ್ಯ ಭಟ್‌ ಚಣಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago