MIRROR FOCUS

#AdityaL1Launch | ಆದಿತ್ಯ ಎಲ್‌-1 ಯಶಸ್ವಿ ಉಡಾವಣೆ | ಸೋಲಾರ್ ಮಿಷನ್ ಹಿಂದೆಯೂ ಮಹಿಳಾ ಶಕ್ತಿ…| ರೈತನ ಮಗಳು ಯೋಜನೆಯ ನಿರ್ದೇಶಕಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆ  ಆದಿತ್ಯ ಎಲ್‌-1  ಬಾಹ್ಯಾಕಾಶ ನೌಕೆಯನ್ನು ಶನಿವಾರ  ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆದಿತ್ಯ ಎಲ್-1 ಲ್ಯಾಗ್ರೇಂಜ್ 1 ಅನ್ನು ತಲುಪಲು ಸುಮಾರು 4 ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಭೂಮಿ ಮತ್ತು ಸೂರ್ಯನ ನಡುವಿನ ಅಂತರವು ಹೆಚ್ಚಿರುವ ಕಾರಣದಿಂದ ದೀರ್ಘ ಸಮಯ ತೆಗೆದುಕೊಳ್ಳಲಿದೆ.ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿ ಎಲ್1 ಲ್ಯಾಗ್ರೇಂಜ್ ಬಿಂದುವಿದೆ. ಭಾರತದ ಮೊದಲ ಸೂರ್ಯ ಮಿಷನ್ ಸೌರ ಮಾರುತಗಳನ್ನು ಅಧ್ಯಯನ ಮಾಡುವ ಗುರಿಯನ್ನು ಹೊಂದಿದೆ.

Advertisement
Advertisement

ಸದ್ಯ ಆದಿತ್ಯ ಎಲ್​-1 ಹೊತ್ತ ರಾಕೆಟ್ ನಿಗದಿತ ಕಕ್ಷೆಯಲ್ಲಿ ಸಂಚರಿಸುತ್ತಿದೆ. 1 ಮತ್ತು 2ನೇ ಹಂತದಲ್ಲಿ ರಾಕೆಟ್​​ನಿಂದ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆ ಬೇರ್ಪಟ್ಟಿದೆ. 3 ಹಾಗೂ 4 ನೇ ಹಂತದಲ್ಲೂ ರಾಕೆಟ್​​ನಿಂದ ಯಶಸ್ವಿಯಾಗಿ ಬೇರ್ಪಟ್ಟಿದ್ದು, ಈ ಕಾರ್ಯ ಯಶಸ್ವಿಯಾಗಿದೆ. ಒಟ್ಟು 15 ಲಕ್ಷ ಕಿ.ಮೀ. ದೂರ ಸಂಚರಿಸುವ ಆದಿತ್ಯ ಎಲ್-1 ನೌಕೆ, ನಿಗದಿತ ಸ್ಥಳಕ್ಕೆ ತಲುಪಲು ಸುಮಾರು 4 ತಿಂಗಳ ಕಾಲ ತೆಗೆದುಕೊಳ್ಳಲಿದೆ ಎಂದು ಇಸ್ರೋ ತಿಳಿಸಿದೆ. ಸೂರ್ಯನ ಮೇಲ್ಮೈ, ಸೂರ್ಯನ ಕಿರಣ, ತಾಪಮಾನ, ಸೌರಜ್ವಾಲೆ, ಸೂರ್ಯನ ಸುತ್ತಲಿನ ವಾತಾವರಣದ ಬಗ್ಗೆ ಆದಿತ್ಯ ಎಲ್​-1 ಅಧ್ಯಯನ ನಡೆಸಲಿದೆ. ಈ ವಿಚಾರದಲ್ಲಿ ಇಸ್ರೋ ವಿಜ್ಞಾನಿಗಳ ಅಧ್ಯಯನಕ್ಕೆ ಪೂರಕ ಚಿತ್ರಗಳನ್ನು, ಮಾಹಿತಿಗಳನ್ನು ಒದಗಿಸಲಿದೆ.

ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆ  ಆದಿತ್ಯ ಎಲ್‌-1 ಇದರ ಕಾರ್ಯಕ್ರಮ ನಿರ್ದೇಶಕಿಯಾಗಿ  ನಿಗರ್ ಶಾಜಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕೂಡಾ ತಮಿಳುನಾಡು ಮೂಲದವರು. ಚಂದ್ರಯಾನದಲ್ಲೂ ತಮಿಳುನಾಡು ಮೂಲದವರು ನೇತೃತ್ವ ವಹಿಸಿದ್ದರು. ತಮಿಳುನಾಡಿನ ಮಾಯಿಲ್‌ಸಾಮಿ ಅಣ್ಣಾದೊರೈ ಮತ್ತು ಎಂ ವನಿತಾ ಚಂದ್ರಯಾನ 1 ಮತ್ತು 2 ನೇತೃತ್ವ ವಹಿಸಿದ್ದರು.

ಇದೀಗ ತಮಿಳುನಾಡಿನ ದಕ್ಷಿಣ ಜಿಲ್ಲೆ ತೆಂಕಶಿಯ ಮಹಿಳಾ ವಿಜ್ಞಾನಿ ನಿಗರ್ ಶಾಜಿ ಅವರು ಆದಿತ್ಯ ಎಲ್ 1 ಮಿಷನ್‌ನ ಯೋಜನಾ ನಿರ್ದೇಶಕರಾಗಿದ್ದಾರೆ.  ಶಾಜಿಯ ಅವರು ತಮಿಳುನಾಡಿನ ಸೆಂಗೊಟ್ಟೈ ಪಟ್ಟಣದವರು.  ಅಲ್ಲಿನ ರೈತ ಶೇಖ್ ಮೀರಾನ್ ಅವರ ಪುತ್ರಿ. ಶಾಜಿ ಅವರ ತಂದೆ ಕೃಷಿಕನಾಗಿ ಕೆಲಸ ಮಾಡುತ್ತಿದ್ದರು. ಸರ್ಕಾರಿ ಬಾಲಕಿಯರ  ಶಾಲೆಯಲ್ಲಿ ಓದಿದ ಶಾಜಿ ಅವರು ತಿರುನಲ್ವೇಲಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿಯನ್ನು ಪೂರ್ಣಗೊಳಿಸಿ, 1987 ರಲ್ಲಿ,ಇಸ್ರೋ ಸೇರಿದರು.

Advertisement

ಆದಿತ್ಯ-ಐ1 ಮಿಷನ್‌ನಲ್ಲಿ ತೊಡಗಿಸಿಕೊಳ್ಳುವ ಮೊದಲು, ನಿಗರ್ ಶಾಜಿ ಅವರು ಭಾರತೀಯ ರಿಮೋಟ್ ಸೆನ್ಸಿಂಗ್, ಸಂವಹನ ಮತ್ತು ಅಂತರಗ್ರಹ ಉಪಗ್ರಹಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದರು. ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹ ರಿಸೋರ್ಸ್‌ಸ್ಯಾಟ್-2ಂ ಗಾಗಿ ಸಹಾಯಕ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

6 minutes ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

13 minutes ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

19 minutes ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

34 minutes ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

11 hours ago