Advertisement
MIRROR FOCUS

#AdityaL1Launch | ಆದಿತ್ಯ ಎಲ್‌-1 ಯಶಸ್ವಿ ಉಡಾವಣೆ | ಸೋಲಾರ್ ಮಿಷನ್ ಹಿಂದೆಯೂ ಮಹಿಳಾ ಶಕ್ತಿ…| ರೈತನ ಮಗಳು ಯೋಜನೆಯ ನಿರ್ದೇಶಕಿ |

Share

ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆ  ಆದಿತ್ಯ ಎಲ್‌-1  ಬಾಹ್ಯಾಕಾಶ ನೌಕೆಯನ್ನು ಶನಿವಾರ  ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆದಿತ್ಯ ಎಲ್-1 ಲ್ಯಾಗ್ರೇಂಜ್ 1 ಅನ್ನು ತಲುಪಲು ಸುಮಾರು 4 ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಭೂಮಿ ಮತ್ತು ಸೂರ್ಯನ ನಡುವಿನ ಅಂತರವು ಹೆಚ್ಚಿರುವ ಕಾರಣದಿಂದ ದೀರ್ಘ ಸಮಯ ತೆಗೆದುಕೊಳ್ಳಲಿದೆ.ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿ ಎಲ್1 ಲ್ಯಾಗ್ರೇಂಜ್ ಬಿಂದುವಿದೆ. ಭಾರತದ ಮೊದಲ ಸೂರ್ಯ ಮಿಷನ್ ಸೌರ ಮಾರುತಗಳನ್ನು ಅಧ್ಯಯನ ಮಾಡುವ ಗುರಿಯನ್ನು ಹೊಂದಿದೆ.

ಸದ್ಯ ಆದಿತ್ಯ ಎಲ್​-1 ಹೊತ್ತ ರಾಕೆಟ್ ನಿಗದಿತ ಕಕ್ಷೆಯಲ್ಲಿ ಸಂಚರಿಸುತ್ತಿದೆ. 1 ಮತ್ತು 2ನೇ ಹಂತದಲ್ಲಿ ರಾಕೆಟ್​​ನಿಂದ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆ ಬೇರ್ಪಟ್ಟಿದೆ. 3 ಹಾಗೂ 4 ನೇ ಹಂತದಲ್ಲೂ ರಾಕೆಟ್​​ನಿಂದ ಯಶಸ್ವಿಯಾಗಿ ಬೇರ್ಪಟ್ಟಿದ್ದು, ಈ ಕಾರ್ಯ ಯಶಸ್ವಿಯಾಗಿದೆ. ಒಟ್ಟು 15 ಲಕ್ಷ ಕಿ.ಮೀ. ದೂರ ಸಂಚರಿಸುವ ಆದಿತ್ಯ ಎಲ್-1 ನೌಕೆ, ನಿಗದಿತ ಸ್ಥಳಕ್ಕೆ ತಲುಪಲು ಸುಮಾರು 4 ತಿಂಗಳ ಕಾಲ ತೆಗೆದುಕೊಳ್ಳಲಿದೆ ಎಂದು ಇಸ್ರೋ ತಿಳಿಸಿದೆ. ಸೂರ್ಯನ ಮೇಲ್ಮೈ, ಸೂರ್ಯನ ಕಿರಣ, ತಾಪಮಾನ, ಸೌರಜ್ವಾಲೆ, ಸೂರ್ಯನ ಸುತ್ತಲಿನ ವಾತಾವರಣದ ಬಗ್ಗೆ ಆದಿತ್ಯ ಎಲ್​-1 ಅಧ್ಯಯನ ನಡೆಸಲಿದೆ. ಈ ವಿಚಾರದಲ್ಲಿ ಇಸ್ರೋ ವಿಜ್ಞಾನಿಗಳ ಅಧ್ಯಯನಕ್ಕೆ ಪೂರಕ ಚಿತ್ರಗಳನ್ನು, ಮಾಹಿತಿಗಳನ್ನು ಒದಗಿಸಲಿದೆ.

ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆ  ಆದಿತ್ಯ ಎಲ್‌-1 ಇದರ ಕಾರ್ಯಕ್ರಮ ನಿರ್ದೇಶಕಿಯಾಗಿ  ನಿಗರ್ ಶಾಜಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕೂಡಾ ತಮಿಳುನಾಡು ಮೂಲದವರು. ಚಂದ್ರಯಾನದಲ್ಲೂ ತಮಿಳುನಾಡು ಮೂಲದವರು ನೇತೃತ್ವ ವಹಿಸಿದ್ದರು. ತಮಿಳುನಾಡಿನ ಮಾಯಿಲ್‌ಸಾಮಿ ಅಣ್ಣಾದೊರೈ ಮತ್ತು ಎಂ ವನಿತಾ ಚಂದ್ರಯಾನ 1 ಮತ್ತು 2 ನೇತೃತ್ವ ವಹಿಸಿದ್ದರು.

ಇದೀಗ ತಮಿಳುನಾಡಿನ ದಕ್ಷಿಣ ಜಿಲ್ಲೆ ತೆಂಕಶಿಯ ಮಹಿಳಾ ವಿಜ್ಞಾನಿ ನಿಗರ್ ಶಾಜಿ ಅವರು ಆದಿತ್ಯ ಎಲ್ 1 ಮಿಷನ್‌ನ ಯೋಜನಾ ನಿರ್ದೇಶಕರಾಗಿದ್ದಾರೆ.  ಶಾಜಿಯ ಅವರು ತಮಿಳುನಾಡಿನ ಸೆಂಗೊಟ್ಟೈ ಪಟ್ಟಣದವರು.  ಅಲ್ಲಿನ ರೈತ ಶೇಖ್ ಮೀರಾನ್ ಅವರ ಪುತ್ರಿ. ಶಾಜಿ ಅವರ ತಂದೆ ಕೃಷಿಕನಾಗಿ ಕೆಲಸ ಮಾಡುತ್ತಿದ್ದರು. ಸರ್ಕಾರಿ ಬಾಲಕಿಯರ  ಶಾಲೆಯಲ್ಲಿ ಓದಿದ ಶಾಜಿ ಅವರು ತಿರುನಲ್ವೇಲಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿಯನ್ನು ಪೂರ್ಣಗೊಳಿಸಿ, 1987 ರಲ್ಲಿ,ಇಸ್ರೋ ಸೇರಿದರು.

ಆದಿತ್ಯ-ಐ1 ಮಿಷನ್‌ನಲ್ಲಿ ತೊಡಗಿಸಿಕೊಳ್ಳುವ ಮೊದಲು, ನಿಗರ್ ಶಾಜಿ ಅವರು ಭಾರತೀಯ ರಿಮೋಟ್ ಸೆನ್ಸಿಂಗ್, ಸಂವಹನ ಮತ್ತು ಅಂತರಗ್ರಹ ಉಪಗ್ರಹಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದರು. ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹ ರಿಸೋರ್ಸ್‌ಸ್ಯಾಟ್-2ಂ ಗಾಗಿ ಸಹಾಯಕ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

43 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago