#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

September 18, 2023
2:50 PM
ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ. ಇದೀಗ ನಿಗದಿತ ಕಕ್ಷೆ ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ.

ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್‌ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

Advertisement
ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror