ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel