#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

September 18, 2023
2:50 PM
ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ. ಇದೀಗ ನಿಗದಿತ ಕಕ್ಷೆ ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ ಕಳುಹಿಸಲು ಪ್ರಾರಂಭಿಸಿದೆ.

ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್‌ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

Advertisement
ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ
June 18, 2025
3:37 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ
June 17, 2025
10:12 PM
by: The Rural Mirror ಸುದ್ದಿಜಾಲ
ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ
June 17, 2025
10:02 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ
June 17, 2025
9:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group