Advertisement
MIRROR FOCUS

#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

Share

ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್‌ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

Advertisement
ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

39 minutes ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

9 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

14 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

14 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

15 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

23 hours ago