Advertisement
MIRROR FOCUS

#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

Share

ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್‌ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

2 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago