Advertisement
MIRROR FOCUS

#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

Share

ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್‌ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

15 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

15 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago