Advertisement
MIRROR FOCUS

#Aditya-L1 | ಗಣೇಶ ಹಬ್ಬದಂದೇ ಸಿಹಿಸುದ್ದಿ ಕೊಟ್ಟ ಇಸ್ರೋ | ಸೂರ್ಯನ ಕುರಿತು ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1 |

Share

ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್‌ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್‌-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಎಕ್ಸ್‌ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

23 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

24 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago