Advertisement
MIRROR FOCUS

#AdityaL1 | ಯಶಸ್ಸಿನ ಹಾದಿಯಲ್ಲಿ ಸಾಗುತ್ತಿರುವ ಆದಿತ್ಯ ಎಲ್‌ 1 | ಮತ್ತೊಂದು ಎತ್ತರದ ಕಕ್ಷೆ ಸೇರಿ ಸೂರ್ಯನಿಗೆ ಇನ್ನಷ್ಟು ಹತ್ತಿರವಾದ ಆದಿತ್ಯ ನೌಕೆ

Share

ಚಂದ್ರಯಾನ – 3 Chandrayana – 3 ಯಶಸ್ವಿ ಉಡಾವಣೆ ನಂತರ ಇಸ್ರೋ ISRO ಸಾಧನೆ ಮೇಲೆ ಸಾಧನೆಗೈಯ್ಯುತ್ತಿದೆ. ತದನಂತರ ಉಡಾವಣೆ ಮಾಡಿದ್ದ ಆದಿತ್ಯ ಎಲ್‌1 Aditya L1 ಕೂಡ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ  ಉಡಾವಣೆ ಮಾಡಿರುವ ಆದಿತ್ಯ ಎಲ್‌1  ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

ಸೂರ್ಯನನ್ನು ಅಧ್ಯಯನ ಮಾಡುವ ಇಸ್ರೋದ ಮಹತ್ವಾಕಾಂಕ್ಷೆಯ ಮಿಷನ್ ಸೆಪ್ಟೆಂಬರ್ 2 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಯಿತು. ಬಾಹ್ಯಾಕಾಶ ನೌಕೆಯು 125 ದಿನಗಳ ನಂತರ L1 ಪಾಯಿಂಟ್‌ನಲ್ಲಿ ಉದ್ದೇಶಿತ ಕಕ್ಷೆಗೆ ಆಗಮಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಆದಿತ್ಯ-ಎಲ್1 ಉಪಗ್ರಹ ಭೂಮಿ ಮತ್ತು ಚಂದ್ರನ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿತ್ತು.

ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್-1 ಪಾಯಿಂಟ್‌ನಿಂದ ಸೂರ್ಯನನ್ನು ಅಧ್ಯಯನ ನಡೆಸಲಿದೆ. ISRO ಪ್ರಕಾರ, L1 ಬಿಂದುವಿನ ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾದ ಬಾಹ್ಯಾಕಾಶ ನೌಕೆಯು ಯಾವುದೇ ಗ್ರಹಣಗಳಿಲ್ಲದೆ ಸೂರ್ಯನನ್ನು ನಿರಂತರವಾಗಿ ವೀಕ್ಷಿಸುವ ಪ್ರಯೋಜನವನ್ನು ಹೊಂದಿದೆ. ಇದು ಸೌರ ಚಟುವಟಿಕೆಗಳನ್ನು ವೀಕ್ಷಿಸಲು ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

6 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

13 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

13 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

21 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

2 days ago