Advertisement
MIRROR FOCUS

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

Share

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ ಬೇಡಿಕೆಯನ್ನು ಪೂರೈಸಲು ಹೊಸ ಆಯ್ಕೆಗಳನ್ನು ಉತ್ತೇಜಿಸುವ ಅವಶ್ಯಕತೆಯಿದೆ. ಕಡಿಮೆ ಭೂಮಿಯಲ್ಲಿ ಹೆಚ್ಚು ಇಳುವರಿ ನೀಡಲು ಲಂಬ ಕೃಷಿ ತಂತ್ರಜ್ಞಾನದಲ್ಲಿ ಹೆಚ್ಚಿನ ಕೆಲಸ ಅಗತ್ಯವಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು “ಭಾರತೀಯ ಕೃಷಿ ಸಂಶೋಧನಾ ಮಂಡಳಿ ಮತ್ತು ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು ಅಭಿವೃದ್ಧಿಪಡಿಸಿದ ಸುಧಾರಿತ ಬೀಜಗಳು ಮತ್ತು ಸುಧಾರಿತ ತಳಿಗಳು ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಸಹಾಯಕವಾಗಿವೆ. ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಡ್ರೋನ್ ತಂತ್ರಜ್ಞಾನ, ಉಪಗ್ರಹ ಚಿತ್ರಣ ಮತ್ತು ಸ್ಮಾರ್ಟ್ ನೀರಾವರಿ ವ್ಯವಸ್ಥೆಗಳ ಬಳಕೆಯು ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ನೀರಿನ ಬಳಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ” ಎಂದರು.ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ, ಕೃಷಿಯನ್ನು ಅಭಿವೃದ್ಧಿಗೊಳಿಸುವಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಪಾತ್ರ ಪ್ರಮುಖವಾಗಿದ್ದು, ಸಮಗ್ರ ಕೃಷಿಯ ಪ್ರಗತಿಗೆ ಹಾಗೂ ಸುಧಾರಿತ ತಳಿಗಳ ಸಂಶೋಧನೆಗೆ ಹೆಚ್ಚಿನ ಮಹತ್ವ ನೀಡಿವೆ ಎಂದು ಹೇಳಿದರು. ಕೃಷಿಯಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ರೈತರ ಹಾಗೂ ಕೃಷಿ ಕ್ಷೇತ್ರದ ಪ್ರಗತಿಗಾಗಿ ಶ್ರಮಿಸಬೇಕು, ವೈಯಕ್ತಿಯ ಬೆಳವಣಿಗೆಯ ಜೊತೆಗೆ ತಮ್ಮ ಜ್ಞಾನವನ್ನು ಸಮಾಜಮುಖಿ ಕಾರ್ಯಗಳಿಗಾಗಿ ಬಳಸಬೇಕು ಎಂದರು.

ಸಚಿವ ಎನ್. ಚಲುವನಾರಾಯಣಸ್ವಾಮಿ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜೊತೆಗೆ, ಕೃಷಿಗೆ ಸಂಬಂಧಿಸಿದ  ನೂತನ ಸಂಶೋಧನೆ ಹಾಗೂ ಅವಿಷ್ಕಾರಗಳ  ಮೂಲಕ ಕೃಷಿ ವಿಶ್ವವಿದ್ಯಾಲಯ ಪ್ರಗತಿ ಸಾಧಿಸಿದೆ, ಸುಧಾರಿತ ಬೀಜಗಳನ್ನು ಹಾಗೂ ನೂತನ ತಳಿಗಳಿಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ರೈತರ ಆದಾಯ ಹೆಚ್ಚಿಸಲು ವಿದ್ಯಾಲಯ ಸಹಕಾರಿಯಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಚಿವರಾದ ಎನ್.ಚಲುವನಾರಾಯಣಸ್ವಾಮಿ, ನವದೆಹಲಿ ಇಫ್ಕೋ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಯು.ಎಸ್.ಅವಸ್ಥಿ, ಕುಲಪತಿ ಡಾ.ಎಸ್.ವಿ.ಸುರೇಶ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago