ರಕ್ಷಣಾ ವಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗಿದ್ದು, ಸಂಶೋಧನೆ ಮತ್ತು ಆವಿಷ್ಕಾರ ವಲಯದಲ್ಲಿ ಗಣನೀಯ ಕೆಲಸ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅವರು, ರಕ್ಷಣಾ ವಲಯದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಮಾಡುವ ಸಂಬಂಧ ಭಾರತ ಕಾರ್ಯತತ್ಪರವಾಗಿದೆ. ಹಲವು ವಲಯದಲ್ಲಿ ಈಗಾಗಲೇ ಪ್ರತಿಫಲ ದೊರೆಯುತ್ತಿದೆ. ಹಲವು ರೀತಿಯ ಶಸ್ತ್ರಾಸ್ತ್ರಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆ ಸಾಧ್ಯ ಎನ್ನುವುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ದೇಶ ದಾಪುಗಾಲಿಡುತ್ತಿದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel