Advertisement
MIRROR FOCUS

ಅಡಿಕೆಯ ಮಿತ ಬಳಕೆ ಆರೋಗ್ಯಕ್ಕೆ ಉತ್ತಮ | ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ ? ಏಕೆ ? |

Share

ಪ್ರಪಂಚದಾದ್ಯಂತ ಅಡಿಕೆ ಹಾನಿಕಾರಕ ಎಂಬ ಭಯ ಹುಟ್ಟಿಸಲಾಗುತ್ತಿದೆ. ಅಡಿಕೆ ಕ್ಯಾನ್ಸರ್‌ಕಾರಕ ಎಂದೂ ಹೇಳಲಾಗುತ್ತದೆ. ಆದರೆ ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಡಿಕೆಯ ಬಳಕೆ ಪರಂಪರಾಗತವಾಗಿ ಬಂದಿದೆ. ಶತಮಾನಗಳಿಂದ ಅಡಿಕೆಯ ಮೂಲ ರೂಪದಲ್ಲಿ ಸೇವನೆ, ಅಡಿಕೆಯ ಮಿತ ಬಳಕೆ ಆರೋಗ್ಯದ ಮೇಲೆ ಯಾವ ಪರಿಣಾಮವೂ ಬೀರಿಲ್ಲ.ಹಾಗಿದ್ದರೆ ಭಾರತದಲ್ಲಿ ಅಡಿಕೆಯ ಬಳಕೆ ಹಾಗೂ ಅಡಿಕೆ ಹಾನಿಕಾರಕವಲ್ಲ ಎನ್ನುವ ಸಂದೇಶ ಸಾರಬೇಕಾಗಿದೆ.

ಭಾರತದಲ್ಲಿ ಪಾನ್ ತಿನ್ನುವ ಸಂಪ್ರದಾಯವು ಶತಮಾನಗಳಷ್ಟು ಹಳೆಯದು. ಗ್ರಾಮೀಣ ಭಾಗದಲ್ಲಿ ಇಂದಿಗೂ ಒಂದು ಬೀಡಾ ಇಲ್ಲದೇ ಇದ್ದರೆ ಯಾವ ಕಾರ್ಯಕ್ರಮಗಳೂ ಪರಿಪೂರ್ಣವಲ್ಲ. ಜನರು ಸಾಮಾನ್ಯವಾಗಿ ವೀಳ್ಯದೆಲೆ, ಸುಣ್ಣ ಮತ್ತು ಅಡಿಕೆಯ ಚೂರುಗಳೊಂದಿಗೆ ವೀಳ್ಯದೆಲೆಯನ್ನು ಜಗಿಯುತ್ತಾರೆ. ಆದರೆ ಬೇರೆ ಬೇರೆ ಕಡೆ ವಿಧಾನಗಳು ಮಾತ್ರಾ ಬೇರೆಯದೇ ಇದೆ. ದಕ್ಷಿಣ ಕನ್ನಡದ ಭಾಗದಲ್ಲಿ ಹಸಿ ಅಡಿಕೆಯನ್ನು ಜಗಿದರೆ, ಉತ್ತರ ಕನ್ನಡ ಭಾಗದಲ್ಲಿ ಕೆಂಪಡಿಕೆ ಜಗಿಯುತ್ತಾರೆ, ಉತ್ತರ ಭಾರತದ ಕಡೆಗೆ ಹೋದರೆ ಚಾಲಿ ಅಡಿಕೆಯನ್ನು ಜಗಿಯುತ್ತಾರೆ. ಅದನ್ನು ತಿನ್ನುವ ವಿಧಾನ ಮತ್ತು ರುಚಿ ವಿವಿಧ ಸ್ಥಳಗಳಲ್ಲಿ ಸ್ವಲ್ಪ ಭಿನ್ನವಾಗಿರುತ್ತದೆ. ಆದರೆ ನೀವು ವೀಳ್ಯದೆಲೆಯನ್ನು ಸರಳ ರೀತಿಯಲ್ಲಿ ಸೇವಿಸಿದರೆ, ಅದು ಅನೇಕ ಆರೋಗ್ಯ ಸಂಬಂಧಿ ಕಾಯಿಲೆಗಳನ್ನು ದೂರ ಮಾಡುತ್ತವೆ, ಆರೋಗ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಶತಮಾನಗಳಿಂದಲೂ ಅನೇಕರು ಅಡಿಕೆ ಜಗಿಯುತ್ತಾರೆ, ಬೀಡಾ ಜಗಿಯುತ್ತಾರೆ. ವೀಳ್ಯದೆಲೆ ತಿನ್ನುವ ಪ್ರಯೋಜನಗಳು ಹೀಗಿವೆ…

ಕೆಮ್ಮು ಪರಿಹಾರ: ಆಂಟಿಆಕ್ಸಿಡೆಂಟ್‌ಗಳು ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ವೀಳ್ಯದೆಲೆಯಲ್ಲಿ ಕಂಡುಬರುತ್ತವೆ, ಇದು ಕೆಮ್ಮಿನ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮಧುಮೇಹಿಗಳಿಗೆ ಪ್ರಯೋಜನಗಳು: ವೀಳ್ಯದೆಲೆಯಲ್ಲಿ ಮಧುಮೇಹ-ವಿರೋಧಿ ಗುಣಲಕ್ಷಣಗಳು ಕಂಡುಬರುತ್ತವೆ, ಇದು ಮಧುಮೇಹಿಗಳಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ. ಇದನ್ನು ಸೇವಿಸುವುದರಿಂದ ನಿಮ್ಮ ದೇಹದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಬಹುದು.

ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸಿಕೊಳ್ಳಿ: ವೀಳ್ಯದೆಲೆಯನ್ನು ಸೇವಿಸುವುದರಿಂದ ನಿಮ್ಮ ಜೀರ್ಣಕ್ರಿಯೆಯು ಆರೋಗ್ಯಕರವಾಗಿರುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುವಾಗ ಜೀರ್ಣಾಂಗ ವ್ಯವಸ್ಥೆಯನ್ನು ಹೆಚ್ಚಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ನೀವು ಜೀರ್ಣಕ್ರಿಯೆಯನ್ನು ಸುಧಾರಿಸಲು ಬಯಸಿದರೆ, ವೀಳ್ಯದೆಲೆ, ಬೀಡಾ ತಿನ್ನಿರಿ.

ಹಸಿವನ್ನು ಹೆಚ್ಚಿಸುತ್ತವೆ: ಹಸಿವಿನ ಕೊರತೆ ಇರುವವರು ಬೀಡಾ,ವೀಳ್ಯದೆಲೆಯನ್ನು ಸೇವಿಸಬೇಕು. ವೀಳ್ಯದೆಲೆಯನ್ನು ಜಗಿಯುವುದರಿಂದ ಹಸಿವು ಹೆಚ್ಚಾಗುತ್ತದೆ.

ಬಾಯಿ ಹುಣ್ಣುಗಳಿಂದ ಪರಿಹಾರ: ವೀಳ್ಯದೆಲೆಯ ಸೇವನೆಯಿಂದ ಬಾಯಿ ಹುಣ್ಣಿನ ಸಮಸ್ಯೆಯೂ ದೂರವಾಗುತ್ತದೆ. ಇದರಲ್ಲಿರುವ ಬ್ಯಾಕ್ಟೀರಿಯಾದ ಗುಣಲಕ್ಷಣಗಳು ಬಾಯಿಯಲ್ಲಿ ಸೋಂಕು ಹರಡುವುದನ್ನು ತಡೆಯಲು  ಸಹಾಯ ಮಾಡುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

4 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

8 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago