ಅಡಿಕೆಗೆ ಪರ್ಯಾಯ ಬೆಳೆ ಬೆಳೆಯಲು ಸಲಹೆ

October 15, 2025
7:17 AM

ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು ಅಲ್ಲದೆ ಬೆಳೆ ಕಳವಾಗುವ ಆತಂಕವೂ ಇರುವುದಿಲ್ಲ ಎಂದು ಕೃಷಿ ಜಂಟಿ ನಿರ್ದೇಶಕ ಡಿ.ಪಿ ಸತೀಶ್ ಹೇಳಿದ್ದಾರೆ.

ಉತ್ತರಕನ್ನಡ ಯಲ್ಲಾಪುರ ತಾಲೂಕಿನ ಮಲವಳ್ಳಿಯಲ್ಲಿ ತೋಟಗಾರಿಕಾ ಇಲಾಖೆ ಮತ್ತು ಶ್ರೀದೇವಿ ಸೇವಾ ರೈತ ಉತ್ಪಾದಕ ಕಂಪನಿ ವತಿಯಿಂದ ರೈತ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಸಂದರ್ಭ ಎಲೆಚುಕ್ಕೆ ರೋಗ, ತಾಳೆ ಬೆಳೆ, ಅಡಿಕೆ ಕೃಷಿ ಕುರಿತು ರೈತರಿಗೆ ತಜ್ಞರು ಮಾಹಿತಿ ನೀಡಿದರು.

ಕೃಷಿ ವಿಜ್ಞಾನಿ ರೂಪಾ ಪಾಟೀಲ್, ಉತ್ತರಕನ್ನಡ ಜಿಲ್ಲೆಯಲ್ಲಿ ಜೇನು ಕೃಷಿ, ತಾಳೆ, ಭತ್ತ ಬೆಳೆಯಲು ಉತ್ತಮ ವಾತಾವರಣವಿದೆ. ಸರ್ಕಾರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಏಳಿಗೆ ಕಂಡುಕೊಳ್ಳಬೇಕು ಎಂದರು.

ಕೃಷಿ ಎಂದಿಗೂ ಕಷ್ಟವಲ್ಲ ಆದರೆ, ಕೃಷಿಯಲ್ಲಿ ಹೆಚ್ಚು ಸಂಶೋಧನೆ ನಡೆದಾಗ ರೈತರು ಉತ್ತಮ ಆದಾಯ ಗಳಿಸಲು ಸಾಧ್ಯ ಎಂದು ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸುಬ್ರಹ್ಮಣ್ಯ ಗೌಂವ್ಕರ್‌ ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳ ಶೆಡ್ ನಿರ್ಮಾಣಕ್ಕೆ MGNREGA ಯೋಜನೆಯಿಂದ ರೂ 57,000 ಸಹಾಯಧನ
December 4, 2025
9:46 PM
by: ರೂರಲ್‌ ಮಿರರ್ ಸುದ್ದಿಜಾಲ
ಕೂದಲು ಉದುರುವಿಕೆಗೆ ತಡೆಗೆ ಪ್ರೋಟಿನ್ ಭರಿತ ಆಹಾರ
December 4, 2025
9:43 PM
by: ರೂರಲ್‌ ಮಿರರ್ ಸುದ್ದಿಜಾಲ
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಸ್ಕ್ಯಾನ್ ಅಳವಡಿಕೆ
December 4, 2025
9:41 PM
by: ರೂರಲ್‌ ಮಿರರ್ ಸುದ್ದಿಜಾಲ
ಬೆನ್ನು, ಮೊಣಕಾಲುಗಳನ್ನು ಬಲಪಡಿಸಲು ನೆರವಾಗುವ ಆಹಾರ ಕ್ರಮಗಳು
December 4, 2025
9:39 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror