Advertisement
MIRROR FOCUS

ಅಡಿಕೆಗೆ ಪರ್ಯಾಯ ಬೆಳೆ ಬೆಳೆಯಲು ಸಲಹೆ

Share

ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು ಅಲ್ಲದೆ ಬೆಳೆ ಕಳವಾಗುವ ಆತಂಕವೂ ಇರುವುದಿಲ್ಲ ಎಂದು ಕೃಷಿ ಜಂಟಿ ನಿರ್ದೇಶಕ ಡಿ.ಪಿ ಸತೀಶ್ ಹೇಳಿದ್ದಾರೆ.

ಉತ್ತರಕನ್ನಡ ಯಲ್ಲಾಪುರ ತಾಲೂಕಿನ ಮಲವಳ್ಳಿಯಲ್ಲಿ ತೋಟಗಾರಿಕಾ ಇಲಾಖೆ ಮತ್ತು ಶ್ರೀದೇವಿ ಸೇವಾ ರೈತ ಉತ್ಪಾದಕ ಕಂಪನಿ ವತಿಯಿಂದ ರೈತ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಸಂದರ್ಭ ಎಲೆಚುಕ್ಕೆ ರೋಗ, ತಾಳೆ ಬೆಳೆ, ಅಡಿಕೆ ಕೃಷಿ ಕುರಿತು ರೈತರಿಗೆ ತಜ್ಞರು ಮಾಹಿತಿ ನೀಡಿದರು.

ಕೃಷಿ ವಿಜ್ಞಾನಿ ರೂಪಾ ಪಾಟೀಲ್, ಉತ್ತರಕನ್ನಡ ಜಿಲ್ಲೆಯಲ್ಲಿ ಜೇನು ಕೃಷಿ, ತಾಳೆ, ಭತ್ತ ಬೆಳೆಯಲು ಉತ್ತಮ ವಾತಾವರಣವಿದೆ. ಸರ್ಕಾರ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಏಳಿಗೆ ಕಂಡುಕೊಳ್ಳಬೇಕು ಎಂದರು.

ಕೃಷಿ ಎಂದಿಗೂ ಕಷ್ಟವಲ್ಲ ಆದರೆ, ಕೃಷಿಯಲ್ಲಿ ಹೆಚ್ಚು ಸಂಶೋಧನೆ ನಡೆದಾಗ ರೈತರು ಉತ್ತಮ ಆದಾಯ ಗಳಿಸಲು ಸಾಧ್ಯ ಎಂದು ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಸುಬ್ರಹ್ಮಣ್ಯ ಗೌಂವ್ಕರ್‌ ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

8 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

8 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

17 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

17 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

17 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

18 hours ago