ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

July 21, 2025
6:58 AM

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ ರೈತರಿಗೆ ಹಣ, ಸಮಯ ಉಳಿತಾಯವಾಗುವುದರ ಜತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಬಹುದಾಗಿದೆ ಎಂದು ದಾವಣಗೆರೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಹೇಳಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಕೃಷಿ ಇಲಾಖೆ, ಇಫ್ಕೋ ಸಂಸ್ಥೆಯಿಂದ  ಆಯೋಜಿಸಲಾಗಿದ್ದ  ಡ್ರೋಣ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹರಳು ರೂಪದ ಯೂರಿಯಾವನ್ನು ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೇ, ಬೆಳೆಗಳಿಗೆ ಅನುಕೂಲವಾಗುವ ಸೂಕ್ಷ್ಮ ಮಣ್ಣು ಜೀವಿಗಳು ನಾಶವಾಗುತ್ತವೆ. ಆದರೆ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವುದರಿಂದ ಬೆಳೆಯಲ್ಲಿ ಶೇಕಡ ೮೦ ರಷ್ಟು ಅಧಿಕ ಇಳುವರಿ ಕಾಣಬಹುದಾಗಿದೆ  ಎಂದು ಶ್ರೀಧರಮೂರ್ತಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror