ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ ರೈತರಿಗೆ ಹಣ, ಸಮಯ ಉಳಿತಾಯವಾಗುವುದರ ಜತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಬಹುದಾಗಿದೆ ಎಂದು ದಾವಣಗೆರೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಹೇಳಿದ್ದಾರೆ.
ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಕೃಷಿ ಇಲಾಖೆ, ಇಫ್ಕೋ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಡ್ರೋಣ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹರಳು ರೂಪದ ಯೂರಿಯಾವನ್ನು ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೇ, ಬೆಳೆಗಳಿಗೆ ಅನುಕೂಲವಾಗುವ ಸೂಕ್ಷ್ಮ ಮಣ್ಣು ಜೀವಿಗಳು ನಾಶವಾಗುತ್ತವೆ. ಆದರೆ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವುದರಿಂದ ಬೆಳೆಯಲ್ಲಿ ಶೇಕಡ ೮೦ ರಷ್ಟು ಅಧಿಕ ಇಳುವರಿ ಕಾಣಬಹುದಾಗಿದೆ ಎಂದು ಶ್ರೀಧರಮೂರ್ತಿ ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




