Advertisement
ಸುದ್ದಿಗಳು

ಓಡು ಹುಳ ನಿಮ್ಮಲ್ಲುಂಟಾ…? | ಅದಕ್ಕೆ ರಬ್ಬರ್‌ ಬೆಳೆ ಕಾರಣವಾ…? | ಅಧ್ಯಯನ ಮಾಡಲು ರಬ್ಬರ್‌ ಮಂಡಳಿಗೆ ಸಲಹೆ |

Share

ಬೇಸಗೆಯ ಕೊನೆ, ಮಳೆಗಾಲದ ಆರಂಭ. ಈ ಸಮಯದಲ್ಲಿ ಓಡು ಹುಳ ವಿಪರೀತವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಕಂಡುಬರುತ್ತಿದೆ. ಈ ಹುಳ ರಬ್ಬರ್‌ ಕಾಡಿನಿಂದ ಬರುತ್ತದೆ ಎಂದು ಹಲವಾರು ಮಂದಿ ಹೇಳುತ್ತಾರೆ. ಹೀಗಾಗಿ ಈ ಬಗ್ಗೆ ರಬ್ಬರ್‌ ಮಂಡಳಿಯ ಅಧ್ಯಯನ ನಡೆಸಬೇಕು ಎಂದು ರಬ್ಬರ್‌ ಮಂಡಳಿಗೆ ತಿಳಿಸಲಾಗುವುದು ಎಂದು ರಬ್ಬರ್‌ ಮಂಡಳಿ ಸದಸ್ಯ ಮುಳಿಯ ಕೇಶವ ಭಟ್‌ ಹೇಳಿದ್ದಾರೆ.…….ಮುಂದೆ ಓದಿ…..

Advertisement

ಕಳೆದ ಹಲವಾರು ಸಮಯಗಳಿಂದ ಬೇಸಗೆಯ ಕೊನೆಗೆ ಹಾಗೂ ಮಳೆಗಾಲದ ಆರಂಭದಲ್ಲಿ ಈ ಹುಳ ವಿಪರೀತವಾಗಿ ಕಾಡುತ್ತದೆ. ಹಿಂಡು ಹಿಂಡಾಗಿ ಬರುವ ಈ ಹುಳ ದೀಪದ ಬೆಳಕಿನಲ್ಲಿ ರಾಶಿ ರಾಶಿಯಾಗಿ ಬೀಳುತ್ತದೆ. ಬಳಿಕ ಅಲ್ಲಿಯೇ ರಾಶಿ ಬೀಳುತ್ತದೆ, ತೀರಾ ಕಿರಿಕಿರಿಯಾಗುವ ಈ ಹುಳದ ಬಗ್ಗೆ ಹಲವಾರು ಮಂದಿ ವಿವಿಧ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಆದರೆ ರಬ್ಬರ್‌ ಕಾಡಿನಿಂದಲೇ ಈ ಹುಳ ಬರುತ್ತದೆ ಎಂದು ಹಲವಾರು ಮಂದಿ ಹೇಳುತ್ತಾರೆ. ಆದರೆ ಅಧಿಕೃತವಾದ ಯಾವುದೇ ಅಧ್ಯಯನಗಳು ಈ ಬಗ್ಗೆ ನಡೆದಿಲ್ಲ. ಈ ಹಿಂದೆ ಅಡಿಕೆ ಸೋಗೆಯ ಛಾವಣಿ ಇದ್ದ ಕಡೆ ಇಂತಹ ಹುಳ ಸಾಕಷ್ಟು ಸಂಖ್ಯೆಯಲ್ಲಿ ಇತ್ತು ಎಂದು ಗ್ರಾಮೀಣ ಭಾಗದ ಕೃಷಿಕರು ಹೇಳುತ್ತಾರೆ.…….ಮುಂದೆ ಓದಿ…..

ಈ ಹುಳದಲ್ಲಿ ಆಸಿಡ್‌ ಮಾದರಿಯ ಅಂಶ ಇದ್ದು ಮೈಗೆ ತಾಗಿದರೆ ಸುಟ್ಟ ಗಾಯದ ಮಾದರಿಯಲ್ಲಿ ಮೈಯಲ್ಲಿ ಹುಣ್ಣಾಗುತ್ತದೆ. ಅದರ ಜೊತೆಗೆ ತೀರಾ ಕಿರಿಕಿರಿಯಾಗುವ ಲಕ್ಷಣಗಳನ್ನು ಈ ಹುಳ ಹೊಂದಿದೆ. ಈ ಹುಳದ ನಿವಾರಣೆಗೆ ಯಾವುದೇ ಔಷಧಗಳೂ ಪರಿಣಾಮಕಾರಿಯಾಗಿ ಕೆಲಸ ಮಾಡುವುದಿಲ್ಲ. ಕೆಲವು ಕಡೆ ವಿಪರೀತ ಪ್ರಮಾಣದ ವಿಷವೇ ನಿಯಂತ್ರಣಕ್ಕೆ ಬಳಕೆ ಮಾಡುತ್ತಾರೆ. ಹಾಗಿದ್ದರೂ ಈ ಹುಳದ ಮೂಲ ಯಾವುದು? ಎಲ್ಲಿ ಉತ್ಪಾದನೆಯಾಗುತ್ತದೆ..? ಏನು ಕಾರಣ ಇತ್ಯಾದಿಗಳ ಬಗ್ಗೆ ಅಧ್ಯಯನ ನಡೆದಿಲ್ಲ. ಈಗ ರಬ್ಬರ್‌ ಮೂಲಕವೇ ಈ ಹುಳ ಉತ್ಪಾದನೆಯಾಗುತ್ತದೆ ಎನ್ನುವ ಕೃಷಿಕರ ಮಾಹಿತಿ ಹಿನ್ನೆಲೆಯಲ್ಲಿ ರಬ್ಬರ್‌ ಮಂಡಳಿ  ಸದಸ್ಯ ಮುಳಿಯ ಕೇಶವ ಭಟ್‌ ಅವರು ಈ ಹುಳದ ಬಗ್ಗೆ ಅಧ್ಯಯನವನ್ನು ರಬ್ಬರ್‌ ಬೋರ್ಡ್‌ ಮೂಲಕ ಮಾಡಬೇಕು ಎಂದು ಮನವಿಯಲ್ಲಿ ಸಲ್ಲಿಸಲಿದ್ದಾರೆ.…….ಮುಂದೆ ಓದಿ…..

ಈ ಹಿಂದೆ ಅಡಿಕೆ ಎಲೆಚುಕ್ಕಿ ರೋಗ ಬಂದಾಗ, ರಬ್ಬರ್‌ ಮರದಿಂದ ಈ ರೋಗವು ಅಡಿಕೆಗೆ ಬಂದಿರಬಹುದೇ ಎಂಬ ಸಂದೇಹ ಇದ್ದ ಹಿನ್ನೆಲೆಯಲ್ಲಿ ರಬ್ಬರ್‌ ಬೋರ್ಡ್‌ ಮೂಲಕ ಈ ಬಗ್ಗೆ ಅಧ್ಯಯನ ನಡೆಸಲು ಮನವಿ ಸಲ್ಲಿಸಿದ್ದರು. ಆ ಬಳಿಕ ನಡೆದ ಅಧ್ಯಯನದಿಂದ ರಬ್ಬರ್‌ಗೆ ಬರುವ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗಕ್ಕೆ ಸೂಕ್ತ ಔಷಧಗಳು ಇವೆ. ಆದರೆ ಅಡಿಕೆಗೂ ಈ ರೋಗ ಹರಡುವ ಬಗ್ಗೆ ಯಾವುದೇ ಪ್ರಾಥಮಿಕವಾದ ಮಾಹಿತಿಗಳು ಲಭ್ಯವಾಗಿಲ್ಲ, ಆದರೆ ಈ ಬಗ್ಗೆಯೂ ಅಧ್ಯಯನ ನಡೆಸಲಾಗುತ್ತಿದೆ.…….ಮುಂದೆ ಓದಿ…..

ಈ ಹುಳದ ನಿಯಂತ್ರಣಕ್ಕೆ ಹಲವಾರು ಮಂದಿ ವಿಪರೀತ ಪ್ರಮಾಣದ ವಿಷ ಸಿಂಪಡಣೆ ಮಾಡಲಾಗುತ್ತಿದೆ. ಇದು ದೀರ್ಘಕಾಲದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.  ವಿಷ ಸಿಂಪಡಣೆ ಮಾಡಿ ಆ ಹುಳಗಳು ಬಿದ್ದ ಬಳಿಕ ಅದನ್ನು ರಾಶಿ ಮಾಡಿ ಉರಿಸುವ ಕೆಲಸ ಹಲವು ಕಡೆ ಮಾಡುತ್ತಾರೆ. ಹೀಗೆ ಸುಡುವುದರ ಪರಿಣಾಮದ ಬಗ್ಗೆಯೂ ಯಾವುದೇ ವೈಜ್ಞಾನಿಕವಾದ ಅಧ್ಯಯನಗಳಿಲ್ಲ.

ಮಳೆ ದೂರವಾಗಿ ಬಿಸಿಲು ಬಂದ ತಕ್ಷಣವೇ ಸಂಜೆ ವೇಳೆ ಬೆಳಕಿಗೆ ಹಾರಿ ಬರುತ್ತವೆ. ಮಳೆ ನಿರಂತರವಾಗಿ ಸುರಿಯುತ್ತಿದ್ದಂತೆಯೇ ದೂರದಿಂದ ಹಾರಿ ಬರುವ ಹುಳ ಕಡಿಮೆಯಾಗುತ್ತದೆ, ಮನೆಯ ಛಾವಣಿಯಲ್ಲಿ ಇರುವುದು ಹಾಗೇ ಉಳಿಯುತ್ತದೆ ಎನ್ನುತ್ತಾರೆ ಕೃಷಿಕರು. ಇದೀಗ ಓಡುಹುಳದ ಬಗ್ಗೆ ಕೂಡಾ ಕೃಷಿಕರು ಹೆಚ್ಚಿನ ಹಿಮ್ಮಾಹಿತಿಯನ್ನು ನೀಡಿದರೆ ರಬ್ಬರ್‌ ಮಂಡಳಿಯ ಮೂಲಕ ಅಧ್ಯಯನ ನಡೆಸುವುದಕ್ಕೆ ಹೆಚ್ಚು ಅನುಕೂಲವಾಗಬಹುದು.…….ಮುಂದೆ ಓದಿ…..

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

19 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

1 day ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

1 day ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

2 days ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

2 days ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 days ago