ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.
ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…