ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.
ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…