ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ | 6.3 ತೀವ್ರತೆಯ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿ |

October 8, 2023
4:33 PM
ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

ಇರಾನ್ ಗಡಿಯ ಸಮೀಪ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶನಿವಾರ 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

ಅಪ್ಘಾನಿಸ್ತಾನದ ಗ್ರಾಮೀಣ ಪ್ರದೇಶಗಳಿಂದ ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ, ತಾಲಿಬಾನ್ ಸರ್ಕಾರಿ ಇಲಾಖೆಯು  2,000 ಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ತಿಳಿಸಿದೆ.ಕನಿಷ್ಠ 465 ಮನೆಗಳನ್ನು ನೆಲಸಮವಾಗಿವೆ.

ಶನಿವಾರ ಸಂಭವಿಸಿದ ಪ್ರಬಲವಾದ ನಂತರದ  ಸುತ್ತಲೂ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬದುಕುಳಿದವರು ತಮ್ಮ ಭಯವನ್ನು ವಿವರಿಸಿದರು. ಘಟನೆಯಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಸಮರ್ಪಕ ವೈದ್ಯಕೀಯ ಸೌಲಭ್ಯಗಳಿರುವ ದೇಶದಲ್ಲಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹೆಣಗಾಡುತ್ತಿವೆ.

ಗ್ರಾಮೀಣ ಭಾಗದಲ್ಲಿನ ಹಳ್ಳಿಗಳಲ್ಲಿ ಇರುವ ಮಣ್ಣಿನ ಮನೆಗಳು ಕುಸಿದವು. “ಮೊದಲ ಅಲುಗಾಡುವಿಕೆಯಲ್ಲಿ ಎಲ್ಲಾ ಮನೆಗಳು ಕುಸಿದವು” ಎಂದು ಹೆರಾತ್ ನಿವಾಸಿ ಬಶೀರ್ ಅಹ್ಮದ್ ಅವರ ಕುಟುಂಬವು AFP ಸುದ್ದಿ ಸಂಸ್ಥೆಗೆ ತಿಳಿಸಿದೆ.

ಹೆರಾತ್ ಇರಾನಿನ ಗಡಿಯ ಪೂರ್ವಕ್ಕೆ 75 ಮೈಲು ದೂರದಲ್ಲಿದೆ. ಇದನ್ನು ಅಫ್ಘಾನಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಂದಾಜು 1.9 ಮಿಲಿಯನ್ ಜನರು ಈ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆಂದು ನಂಬಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ, ಪಕ್ಟಿಕಾ ಪ್ರಾಂತ್ಯವು 5.9 ತೀವ್ರತೆಯ ಭೂಕಂಪದಿಂದ 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದರು.ಅನೇಕರು ನಿರಾಶ್ರಿತರಾಗಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror