Advertisement
MIRROR FOCUS

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ | 6.3 ತೀವ್ರತೆಯ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿ |

Share

ಇರಾನ್ ಗಡಿಯ ಸಮೀಪ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶನಿವಾರ 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

Advertisement

ಅಪ್ಘಾನಿಸ್ತಾನದ ಗ್ರಾಮೀಣ ಪ್ರದೇಶಗಳಿಂದ ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ, ತಾಲಿಬಾನ್ ಸರ್ಕಾರಿ ಇಲಾಖೆಯು  2,000 ಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ತಿಳಿಸಿದೆ.ಕನಿಷ್ಠ 465 ಮನೆಗಳನ್ನು ನೆಲಸಮವಾಗಿವೆ.

ಶನಿವಾರ ಸಂಭವಿಸಿದ ಪ್ರಬಲವಾದ ನಂತರದ  ಸುತ್ತಲೂ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬದುಕುಳಿದವರು ತಮ್ಮ ಭಯವನ್ನು ವಿವರಿಸಿದರು. ಘಟನೆಯಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಸಮರ್ಪಕ ವೈದ್ಯಕೀಯ ಸೌಲಭ್ಯಗಳಿರುವ ದೇಶದಲ್ಲಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹೆಣಗಾಡುತ್ತಿವೆ.

ಗ್ರಾಮೀಣ ಭಾಗದಲ್ಲಿನ ಹಳ್ಳಿಗಳಲ್ಲಿ ಇರುವ ಮಣ್ಣಿನ ಮನೆಗಳು ಕುಸಿದವು. “ಮೊದಲ ಅಲುಗಾಡುವಿಕೆಯಲ್ಲಿ ಎಲ್ಲಾ ಮನೆಗಳು ಕುಸಿದವು” ಎಂದು ಹೆರಾತ್ ನಿವಾಸಿ ಬಶೀರ್ ಅಹ್ಮದ್ ಅವರ ಕುಟುಂಬವು AFP ಸುದ್ದಿ ಸಂಸ್ಥೆಗೆ ತಿಳಿಸಿದೆ.

ಹೆರಾತ್ ಇರಾನಿನ ಗಡಿಯ ಪೂರ್ವಕ್ಕೆ 75 ಮೈಲು ದೂರದಲ್ಲಿದೆ. ಇದನ್ನು ಅಫ್ಘಾನಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಂದಾಜು 1.9 ಮಿಲಿಯನ್ ಜನರು ಈ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆಂದು ನಂಬಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ, ಪಕ್ಟಿಕಾ ಪ್ರಾಂತ್ಯವು 5.9 ತೀವ್ರತೆಯ ಭೂಕಂಪದಿಂದ 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದರು.ಅನೇಕರು ನಿರಾಶ್ರಿತರಾಗಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

5 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

10 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

10 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

10 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

22 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

2 days ago