Advertisement
MIRROR FOCUS

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ | 6.3 ತೀವ್ರತೆಯ ಭೂಕಂಪಕ್ಕೆ 2,000 ಕ್ಕೂ ಹೆಚ್ಚು ಮಂದಿ ಬಲಿ |

Share

ಇರಾನ್ ಗಡಿಯ ಸಮೀಪ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 2000 ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಶನಿವಾರ 6.3 ತೀವ್ರತೆಯ ಭೂಕಂಪವು ಹೆರಾತ್ ನಗರದ ಸಮೀಪವಿರುವ ಕನಿಷ್ಠ 12 ಹಳ್ಳಿಗಳನ್ನು ನಾಶಗೊಳಿಸಿದೆ.

Advertisement
Advertisement

ಅಪ್ಘಾನಿಸ್ತಾನದ ಗ್ರಾಮೀಣ ಪ್ರದೇಶಗಳಿಂದ ಮಾಧ್ಯಮಗಳಿಗೆ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ, ತಾಲಿಬಾನ್ ಸರ್ಕಾರಿ ಇಲಾಖೆಯು  2,000 ಕ್ಕಿಂತ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ತಿಳಿಸಿದೆ.ಕನಿಷ್ಠ 465 ಮನೆಗಳನ್ನು ನೆಲಸಮವಾಗಿವೆ.

ಶನಿವಾರ ಸಂಭವಿಸಿದ ಪ್ರಬಲವಾದ ನಂತರದ  ಸುತ್ತಲೂ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬದುಕುಳಿದವರು ತಮ್ಮ ಭಯವನ್ನು ವಿವರಿಸಿದರು. ಘಟನೆಯಿಂದ ಸಾವಿರಾರು ಜನರು ಗಾಯಗೊಂಡಿದ್ದಾರೆ. ಅಸಮರ್ಪಕ ವೈದ್ಯಕೀಯ ಸೌಲಭ್ಯಗಳಿರುವ ದೇಶದಲ್ಲಿ, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹೆಣಗಾಡುತ್ತಿವೆ.

ಗ್ರಾಮೀಣ ಭಾಗದಲ್ಲಿನ ಹಳ್ಳಿಗಳಲ್ಲಿ ಇರುವ ಮಣ್ಣಿನ ಮನೆಗಳು ಕುಸಿದವು. “ಮೊದಲ ಅಲುಗಾಡುವಿಕೆಯಲ್ಲಿ ಎಲ್ಲಾ ಮನೆಗಳು ಕುಸಿದವು” ಎಂದು ಹೆರಾತ್ ನಿವಾಸಿ ಬಶೀರ್ ಅಹ್ಮದ್ ಅವರ ಕುಟುಂಬವು AFP ಸುದ್ದಿ ಸಂಸ್ಥೆಗೆ ತಿಳಿಸಿದೆ.

ಹೆರಾತ್ ಇರಾನಿನ ಗಡಿಯ ಪೂರ್ವಕ್ಕೆ 75 ಮೈಲು ದೂರದಲ್ಲಿದೆ. ಇದನ್ನು ಅಫ್ಘಾನಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಂದಾಜು 1.9 ಮಿಲಿಯನ್ ಜನರು ಈ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದಾರೆಂದು ನಂಬಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ, ಪಕ್ಟಿಕಾ ಪ್ರಾಂತ್ಯವು 5.9 ತೀವ್ರತೆಯ ಭೂಕಂಪದಿಂದ 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದರು.ಅನೇಕರು ನಿರಾಶ್ರಿತರಾಗಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

3 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

3 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

3 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

3 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

3 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

13 hours ago