ಮಂಗಳೂರು | ಆಫ್ರಿಕನ್ ಹಂದಿ ಜ್ವರ ತಡೆಗಟ್ಟಲು ಅಗತ್ಯ ಕ್ರಮ | ದ ಕ ಜಿಲ್ಲಾಧಿಕಾರಿ

November 3, 2022
8:02 PM

ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ  ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ ಎಂದು ದ ಕ ಜಿಲ್ಲಾಧಿಕಾರಿ ರವಿಕುಮಾರ್‌ ಎಂ ಆರ್‌ ತಿಳಿಸಿದ್ದಾರೆ.

ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ.

ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror