Advertisement
ಸುದ್ದಿಗಳು

ಮಂಗಳೂರು | ಆಫ್ರಿಕನ್ ಹಂದಿ ಜ್ವರ ತಡೆಗಟ್ಟಲು ಅಗತ್ಯ ಕ್ರಮ | ದ ಕ ಜಿಲ್ಲಾಧಿಕಾರಿ

Share

ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ  ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ ಎಂದು ದ ಕ ಜಿಲ್ಲಾಧಿಕಾರಿ ರವಿಕುಮಾರ್‌ ಎಂ ಆರ್‌ ತಿಳಿಸಿದ್ದಾರೆ.

ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ.

ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago