Advertisement
ಸುದ್ದಿಗಳು

ಮಂಗಳೂರು | ಆಫ್ರಿಕನ್ ಹಂದಿ ಜ್ವರ ತಡೆಗಟ್ಟಲು ಅಗತ್ಯ ಕ್ರಮ | ದ ಕ ಜಿಲ್ಲಾಧಿಕಾರಿ

Share

ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ  ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ ಎಂದು ದ ಕ ಜಿಲ್ಲಾಧಿಕಾರಿ ರವಿಕುಮಾರ್‌ ಎಂ ಆರ್‌ ತಿಳಿಸಿದ್ದಾರೆ.

ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ.

ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

6 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

6 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

6 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

6 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

16 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

19 hours ago