Advertisement
ಸುದ್ದಿಗಳು

ಮಂಗಳೂರು | ಆಫ್ರಿಕನ್ ಹಂದಿ ಜ್ವರ ತಡೆಗಟ್ಟಲು ಅಗತ್ಯ ಕ್ರಮ | ದ ಕ ಜಿಲ್ಲಾಧಿಕಾರಿ

Share

ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ  ಇರುವುದು ದೃಢಪಟ್ಟಿರುತ್ತದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ ಎಂದು ದ ಕ ಜಿಲ್ಲಾಧಿಕಾರಿ ರವಿಕುಮಾರ್‌ ಎಂ ಆರ್‌ ತಿಳಿಸಿದ್ದಾರೆ.

ಹಂದಿ ಸಾಕಾಣಿಕಾ ಕೇಂದ್ರದಿಂದ 1 ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು 10ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಮನುಷ್ಯರಿಗೆ ಯಾವುದೇ ರೀತಿಯ ರೋಗವುಂಟು ಮಾಡುವುದಿಲ್ಲ. ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡುವುದು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿಂದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ.

ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

5 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

9 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

21 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

22 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

22 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

23 hours ago