ದೆಹಲಿ ಚಲೋ (Dehli Chalo) ನಂತರ ಇದೀಗ ಬೆಂಗಳೂರು ಚಲೋ(Bengaluru Chalo) ಸಮಾವೇಶ ಹಮ್ಮಿಕೊಳ್ಳಲು ರಾಜ್ಯದ(state) ರೈತರ ಸಂಘಗಳು(Frmers Association) ನಿರ್ಧರಿಸಿವೆ. ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರಾಜ್ಯಗಳ ರೈತರು ʻದೆಹಲಿ ಚಲೋʼ ಪ್ರತಿಭಟನೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯದಲ್ಲಿಯೂ ರೈತರು (Farmers) ತಮ್ಮ ಬೇಡಿಕೆಗಳನ್ನು ಒತ್ತಾಯಿಸಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಆಶ್ರಯದಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.17ರಂದು ʻಬೆಂಗಳೂರು ಚಲೋʼ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಬರುವ ರೈತರಿಗೆ ಆಯಾ ಜಿಲ್ಲೆಗಳಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟ ಅಧ್ಯಕ್ಷ ಬೀರಪ್ಪ ದೇಶನೂರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಫೆ.17ರಂದು ರೈತರು ತಮ್ಮ ಬೇಡಿಕೆಗಳನ್ನು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ರಾಜ್ಯಾದ್ಯಂತ ಸುಮಾರು 15 ಸಂಘಟನೆಗಳ ರೈತ ಮುಖಂಡರು, ರೈತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಫೆ.16ರಂದು ಸಂಜೆ ಪ್ರತಿಯೊಬ್ಬ ರೈತರೂ ತಮ್ಮ ಜಿಲ್ಲೆಯ ಹಾಗೂ ತಾಲೂಕು, ಪಟ್ಟಣ, ಗ್ರಾಮಗಳಿಂದ ಬೆಂಗಳೂರಿಗೆ ಬರಬೇಕು ಎಂದು ಮನವಿ ಮಾಡಿದ್ದಾರೆ.
– ಅಂತರ್ಜಾಲ ಮಾಹಿತಿ
Farmers of various states have started “Delhi Chalo” protest demanding fulfillment of various demands including law enforcement to ensure support price. In the wake of this, farmers have held a huge convention in the state to demand their demands.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…